ಈ ವೇಳೆ ಮಾತನಾಡಿದ ವೀಣಾ ಆಳ್ವ ಅವರು ‘ನಗರದಲ್ಲಿ ನೀರಿನ ಕ್ಷಾಮ ಹೆಚ್ಚಾಗಿದೆ. ಅಂತರ್ಜಲ ಮಟ್ಟವೂ ಕುಸಿದಿರುವುದರಿಂದ 90 ಕೊಳವೆ ಬಾವಿಗಳ ನಿರ್ವಹಣೆ ಮಾಡಿದ್ದರೂ, ಕುಡಿಯುವ ನೀರಿಗೆ ಕೊರತೆಯಾಗಿದೆ. ಜತೆಗೆ ನಗರಸಭೆ ವ್ಯಾಪ್ತಿಯ 5 ವಾರ್ಡ್ನ ನಾಗರಿಕರು ತೀವ್ರ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ಈ ಬಡಾವಣೆಗಳಿಗೆ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಹೇಳಿದರು.