ಗೃಹ ರಕ್ಷಕ ದಳದ ಸಿಬ್ಬಂದಿಯಾಗಿದ್ದ ಸುನೀಲ್ ತನ್ನ ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಜನತಾ ನಗರದ ನಿವಾಸಿ ಗಿರಿಧರ್ ಅವರು ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ. ಒಂದು ವೇಳೆ ಸುನಿಲ್ ಹೆಲ್ಮೆಟ್ ಧರಿಸಿದ್ದರೆ ಬದುಕಿ ಉಳಿಯುವ ಸಾಧ್ಯತೆ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕೆ.ಆರ್.ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.