ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೋಲ್‌ನಲ್ಲಿ ಕೊಲೆ: ಮೂವರ ವಶ

Last Updated 13 ಅಕ್ಟೋಬರ್ 2020, 17:09 IST
ಅಕ್ಷರ ಗಾತ್ರ

ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಟೋಲ್ ಗೇಟ್ ಬಳಿ ನಡೆದ, ಟೋಲ್‌ ಸಿಬ್ಬಂದಿ ಗಣೇಶ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಗ್ರಾಮಾಂತರ ದಕ್ಷಿಣ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಶ್ರೀಕಾಂತ್, ದೀಪಕ್, ಮಹೇಶ್‌ ಎಂಬುವರನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಎಸ್‌ಪಿ ಭೇಟಿ: ಕೊಲೆಯಾದ ಸ್ಥಳಕ್ಕೆ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಟೋಲ್‌ ಸಿಬ್ಬಂದಿ ತಮ್ಮ ಸಮಸ್ಯೆ, ಅಹವಾಲನ್ನು ಎಸ್‌ಪಿ ಬಳಿ ಹೇಳಿಕೊಂಡರು. ಸಿಬ್ಬಂದಿಯ ಅಳಲಿಗೆ ಸ್ಪಂದಿಸಿದ ರಿಷ್ಯಂತ್ ಭದ್ರತೆ ಹೆಚ್ಚಿಸುವಂತೆ ಗ್ರಾಮಾಂತರ ಪೊಲೀಸರಿಗೆ ಸೂಚಿಸಿದರು.

ನಾಪತ್ತೆಯಾಗಿರುವ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ, ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT