ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ಬುಧವಾರ ಪತ್ರ ಬರೆದಿರುವ ಅವರು, ‘ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಬಾರದು. ಜಿಲ್ಲಾ ಉಸ್ತುವಾರಿ ಸಚಿವ ಎ,ಮಂಜು ಅವರು ತಮ್ಮ ಸ್ವಾರ್ಥಕ್ಕೆ ಅಧಿಕಾರ ದುರುಪಯೋಗ ಪಡಿಸಿಕೊಂಡು ರೋಹಿಣಿ ವಿರುದ್ಧ ತಮ್ಮ ಪಕ್ಷದ ಕಾರ್ಯಕರ್ತರಿಂದ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿ, ವರ್ಗಾವಣೆ ಮಾಡಿಸಿ ಅಕ್ರಮ ಎಸಗಲು ಮುಂದಾಗಿದ್ದಾರೆ’ ಎಂದು ದೂರಿದ್ದಾರೆ.