<p><strong>ನಂಜನಗೂಡು:</strong> ತಾಲ್ಲೂಕಿನ ಆಲಂಬೂರು ಗ್ರಾಮದಲ್ಲಿಸಿದ್ದರಾಜು (35) ಎಂಬಾತ, ಒಂದು ಗುಂಟೆ ಜಾಗದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ತನ್ನ ಚಿಕ್ಕಪ್ಪ ಲಕ್ಷ್ಮಯ್ಯ (50) ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಸದ್ಯ, ಈತನ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪಿತ್ರಾರ್ಜಿತ ಜಮೀನನ್ನು ತಲಾ 18 ಗುಂಟೆ ಭಾಗ ಮಾಡಿ ಅಣ್ಣ ತಮ್ಮಂದಿರ ನಡುವೆ ಹಂಚಲಾಗಿತ್ತು. ಈ ಪೈಕಿ ಲಕ್ಷ್ಮಯ್ಯ ಅವರಿಗೆ ಒಂದು ಗುಂಟೆ ಜಮೀನು ಹೆಚ್ಚಾಗಿ ಸೇರ್ಪಡೆಗೊಂಡಿತ್ತು. ಜಮೀನು ಮಾರಾಟ ಮಾಡಿದ್ದ ಲಕ್ಷ್ಮಯ್ಯ ಅವರಿಂದ ಇವರ ಸೋದರ ರಾಜು ಅವರ ಪುತ್ರ ಸಿದ್ದರಾಜು ಒಂದು ಗುಂಟೆ ಜಮೀನಿನ ಹಣ ಕೇಳಿದ್ದಾರೆ. ಇದಕ್ಕಾಗಿ ಗ್ರಾಮದಲ್ಲಿ ಪಂಚಾಯ್ತಿಯೂ ನಡೆದಿದೆ. ಈ ವೇಳೆ ಕೋಪಗೊಂಡ ಸಿದ್ದರಾಜು ಚಾಕುವಿನಿಂದ ಇರಿದು ಕೊಲೆ ಮಾಡಿದ ಎಂದು ಅವರು ಹೇಳಿದ್ದಾರೆ.</p>.<p><strong>ಇಬ್ಬರ ಬಂಧನ<br />ಪಿರಿಯಾಪಟ್ಟಣ:</strong> ತಾಲ್ಲೂಕಿನ ಬೆಳತೂರು ಗ್ರಾಮದಲ್ಲಿ, ಡಾ.ಬಿ.ಆರ್.ಅಂಬೇಡ್ಕರ್ ಜೀವನಾಧಾರಿತ ಧಾರಾವಾಹಿ ‘ಮಹಾನಾಯಕ’ ಫ್ಲೆಕ್ಸ್ಗೆ ಏ.13ರ ರಾತ್ರಿ ಬೆಂಕಿ ಹಚ್ಚಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಗ್ರಾಮದ ನವೀನ್ (30) ಹಾಗೂ ಗಿರೀಶ್ (35) ಬಂಧಿತರು. ಇವರಿಗೂ ಅಂಬೇಡ್ಕರ್ ಜಯಂತಿ ಆಚರಿಸುತ್ತಿದ್ದ ಗುಂಪಿಗೂ ಈ ಹಿಂದೆ ಗಲಾಟೆ ನಡೆದಿತ್ತು. ಮದ್ಯ ಸೇವಿಸಿದ್ದ ಇವರು ಅಂದು ರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಫ್ಲೆಕ್ಸ್ಗೆ ಬೆಂಕಿ ಹಚ್ಚಿದ್ದರಿಂದ ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು:</strong> ತಾಲ್ಲೂಕಿನ ಆಲಂಬೂರು ಗ್ರಾಮದಲ್ಲಿಸಿದ್ದರಾಜು (35) ಎಂಬಾತ, ಒಂದು ಗುಂಟೆ ಜಾಗದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ತನ್ನ ಚಿಕ್ಕಪ್ಪ ಲಕ್ಷ್ಮಯ್ಯ (50) ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಸದ್ಯ, ಈತನ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪಿತ್ರಾರ್ಜಿತ ಜಮೀನನ್ನು ತಲಾ 18 ಗುಂಟೆ ಭಾಗ ಮಾಡಿ ಅಣ್ಣ ತಮ್ಮಂದಿರ ನಡುವೆ ಹಂಚಲಾಗಿತ್ತು. ಈ ಪೈಕಿ ಲಕ್ಷ್ಮಯ್ಯ ಅವರಿಗೆ ಒಂದು ಗುಂಟೆ ಜಮೀನು ಹೆಚ್ಚಾಗಿ ಸೇರ್ಪಡೆಗೊಂಡಿತ್ತು. ಜಮೀನು ಮಾರಾಟ ಮಾಡಿದ್ದ ಲಕ್ಷ್ಮಯ್ಯ ಅವರಿಂದ ಇವರ ಸೋದರ ರಾಜು ಅವರ ಪುತ್ರ ಸಿದ್ದರಾಜು ಒಂದು ಗುಂಟೆ ಜಮೀನಿನ ಹಣ ಕೇಳಿದ್ದಾರೆ. ಇದಕ್ಕಾಗಿ ಗ್ರಾಮದಲ್ಲಿ ಪಂಚಾಯ್ತಿಯೂ ನಡೆದಿದೆ. ಈ ವೇಳೆ ಕೋಪಗೊಂಡ ಸಿದ್ದರಾಜು ಚಾಕುವಿನಿಂದ ಇರಿದು ಕೊಲೆ ಮಾಡಿದ ಎಂದು ಅವರು ಹೇಳಿದ್ದಾರೆ.</p>.<p><strong>ಇಬ್ಬರ ಬಂಧನ<br />ಪಿರಿಯಾಪಟ್ಟಣ:</strong> ತಾಲ್ಲೂಕಿನ ಬೆಳತೂರು ಗ್ರಾಮದಲ್ಲಿ, ಡಾ.ಬಿ.ಆರ್.ಅಂಬೇಡ್ಕರ್ ಜೀವನಾಧಾರಿತ ಧಾರಾವಾಹಿ ‘ಮಹಾನಾಯಕ’ ಫ್ಲೆಕ್ಸ್ಗೆ ಏ.13ರ ರಾತ್ರಿ ಬೆಂಕಿ ಹಚ್ಚಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಗ್ರಾಮದ ನವೀನ್ (30) ಹಾಗೂ ಗಿರೀಶ್ (35) ಬಂಧಿತರು. ಇವರಿಗೂ ಅಂಬೇಡ್ಕರ್ ಜಯಂತಿ ಆಚರಿಸುತ್ತಿದ್ದ ಗುಂಪಿಗೂ ಈ ಹಿಂದೆ ಗಲಾಟೆ ನಡೆದಿತ್ತು. ಮದ್ಯ ಸೇವಿಸಿದ್ದ ಇವರು ಅಂದು ರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಫ್ಲೆಕ್ಸ್ಗೆ ಬೆಂಕಿ ಹಚ್ಚಿದ್ದರಿಂದ ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>