ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ ಶಂಕೆ; ಮೂವರ ವಿಚಾರಣೆ

Last Updated 1 ಸೆಪ್ಟೆಂಬರ್ 2021, 7:19 IST
ಅಕ್ಷರ ಗಾತ್ರ

ಮೈಸೂರು: ನಗರದ ಶಾರದಾದೇವಿನಗರದ ನಿವಾಸಿಯೊಬ್ಬರು ನಾಪತ್ತೆಯಾಗಿದ್ದು, ಕೊಲೆ ಶಂಕೆ ಮೂಡಿದೆ.

ಈ ಸಂಬಂಧ ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ನಾಪತ್ತೆಯಾದ ವ್ಯಕ್ತಿಯು ಆಟೊ ಚಾಲಕರಾಗಿದ್ದು, ಕೆಲವರೊಂದಿಗೆ ಬೋಗಾದಿ ಪೆಟ್ರೊಲ್‌ ಬಂಕ್ ಹಿಂಭಾಗ ಆಗಸ್ಟ್ 28ರಂದು ಸಂಜೆ ಕಾಣಿಸಿಕೊಂಡಿದ್ದರು. ಈ ವೇಳೆ ನಡೆದ ಗಲಾಟೆ ಘಟನೆ ಬಳಿಕ ನಾಪತ್ತೆಯಾಗಿದ್ದರು ಎಂದು ಹೇಳಲಾಗಿದೆ.

ಇವರನ್ನು ಕೊಲೆ ಮಾಡಿ ಹೂತಿರುವ ಶಂಕೆ ವ್ಯಕ್ತವಾಗಿರುವುದರಿಂದ ಶಂಕಿತ ಆರೋಪಿಗಳನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ‘ವ್ಯಕ್ತಿಯು ನಾಪತ್ತೆಯಾಗಿದ್ದು, ಹುಡುಕಾಟ ನಡೆದಿದೆ. ಕೆಲವು ಸಂಶಯಗಳ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು. ನಾಪತ್ತೆ ಪ್ರಕರಣ ಸರಸ್ವತಿಪುರಂ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT