ರಾಜ್ಯದಲ್ಲಿ ಪಂಚಮಸಾಲಿ 3ನೇ ಪೀಠ ಸ್ಥಾಪನೆಯ ಹಿಂದೆ ನಾನಿಲ್ಲ. ಆದರೆ, ನನ್ನ ಬೆಂಬಲ ಈ ಪೀಠಕ್ಕೆ ಇದೆ. ಎರಡು ಪೀಠಗಳ ಸ್ವಾಮೀಜಿಗಳ ಒತ್ತಡ ಕಡಿಮೆ ಮಾಡಲು ಈ ಪೀಠದ ಅಗತ್ಯ ಇದೆ. ವಚನಾನಂದ ಸ್ವಾಮೀಜಿ ಸೇರಿ ಹಲವರು ಬೆಂಬಲಿಸಿದ್ದಾರೆ. ಪೀಠ ಸ್ಥಾಪನೆಯ ಹಿಂದೆ ದುರುದ್ದೇಶದ ಪ್ರಶ್ನೆಯೇ ಇಲ್ಲ. ಸಮುದಾಯದ ಜನಸಂಖ್ಯೆ ಹೆಚ್ಚಿರುವ ಕಾರಣ 3ನೇ ಪೀಠದ ಅವಶ್ಯಕತೆ ಇದೆ ಎಂದು ಅವರು ಇಲ್ಲಿ ಪ್ರತಿಪಾದಿಸಿದರು.