ಭತ್ತದ ಖರೀದಿ ಕೇಂದ್ರವನ್ನು ಸಕಾಲದಲ್ಲಿ ತೆರೆಯುತ್ತಿಲ್ಲ, ಕಟಾವು ಮುಗಿದ 2 ತಿಂಗಳ ನಂತರ ದಲ್ಲಾಳಿಗಳಿಂದ ಭತ್ತ ಖರೀದಿ ಮಾಡುವ ಮೂಲಕ ರೈತರನ್ನು ವಂಚಿಸಲಾಗುತ್ತಿದೆ. ನರೇಗಾ ಯೋಜನೆಯಡಿಯಲ್ಲಿ ಬೆಳೆ ಬೆಳೆಯಲು ಸಹಾಯಧನ ಸಿಗುತ್ತಿಲ್ಲ. ಪ್ರತಿ ಟನ್ ಕಬ್ಬಿಗೆ ₹ 3500 ನಿಗದಿ ಮಾಡಬೇಕು. ತರಕಾರಿ, ಹಣ್ಣುಗಳಿಗೆ ಬಜೆಟ್ನಲ್ಲಿ ಪ್ರತಿ ವರ್ಷ ಪ್ರತ್ಯೇಕ ಕನಿಷ್ಠ ಬೆಲೆ ನಿಗದಿ ಮಾಡಬೇಕು ಮೊದಲಾದ ಬೇಡಿಕೆಗಳ ಈಡೇರಿಕೆಗೆ ಪ್ರಧಾನಿಗೆ ಮನವಿ ಸಲ್ಲಿಸಲಾಗುವುದು.