‘ವಸಂತನಗರದಲ್ಲಿ ಮೂಲವ್ಯಾಧಿಗೆ ನಾಟಿ ಔಷಧ ನೀಡುತ್ತಿದ್ದ ಷರೀಫ್ ಬಳಿ ಕೇರಳದಿಂದ ಹೆಚ್ಚಿನ ಮಂದಿ ಬಂದು ಔಷಧ ಪಡೆದು ಗುಣಮುಖರಾಗುತ್ತಿದ್ದರು. ಇದು ಅವರಿಗೆ ಕೇರಳದಲ್ಲಿ ಹೆಚ್ಚಿನ ಪ್ರಸಿದ್ಧಿಯನ್ನು ತಂದುಕೊಟ್ಟಿತ್ತು. ಈ ಔಷಧದ ರಹಸ್ಯ ತಿಳಿದು ದುಬೈ ಸೇರಿದಂತೆ ವಿದೇಶದಲ್ಲಿ ಔಷಧ ಮಾರಾಟ ಮಾಡಿ ಹಣ ಸಂಪಾದಿಸುವ ಉದ್ದೇಶದಿಂದ ಇವರ ಕೊಲೆ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.