ಮಿದುಳು ನಿಷ್ಕ್ರಿಯ: ಚೆನ್ನೈಗೆ ಹೃದಯ ರವಾನೆ

ಮೈಸೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ತಾಲ್ಲೂಕಿನ ಸೋಮನಹಳ್ಳಿಯ ದರ್ಶನ್ (24) ಅವರ ಅಂಗಾಂಗಗಳನ್ನು ಕುಟುಂಬದವರು ದಾನ ಮಾಡಿ ಇತರರ ಬಾಳಿನಲ್ಲಿ ಬೆಳಕು ಮೂಡಿಸಿದ್ದಾರೆ.
ಅವರ ಹೃದಯವನ್ನು ಶುಕ್ರವಾರ ಮೈಸೂರಿನಿಂದ ವಿಮಾನದಲ್ಲಿ ಚೆನ್ನೈನ ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆಗೆ ಸಾಗಿಸಲಾಯಿತು. ಹೃದಯ ಹೊತ್ತ ಆಂಬುಲೆನ್ಸ್ ಅಪೋಲೊ–ಬಿಜಿಎಸ್ ಆಸ್ಪತ್ರೆಯಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲು ‘ಗ್ರೀನ್ ಕಾರಿಡಾರ್’ (ಸಿಗ್ನಲ್ ಮುಕ್ತ ಸಂಚಾರ ವ್ಯವಸ್ಥೆ) ನಿರ್ಮಿಸಲಾಗಿತ್ತು.
ಒಂದು ಕಿಡ್ನಿಯನ್ನು ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಂದು ಕಿಡ್ನಿ ಮತ್ತು ಯಕೃತ್ ಅನ್ನು ಅಪೋಲೊ–ಬಿಜಿಎಸ್ ಆಸ್ಪತ್ರೆಯಲ್ಲೇ ರೋಗಿಗಳಿಗೆ ಕಸಿ ಮಾಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.