‘ದೇಶದ ಪ್ರಮುಖ ನಗರಿಗಳಲ್ಲಿ ಈ ಯೋಜನೆ ಜಾರಿಯಾಗಲಿದೆ. ಕರ್ನಾಟಕದಲ್ಲಿ ಇದಕ್ಕಾಗಿ ಮೈಸೂರನ್ನು ಆಯ್ಕೆ ಮಾಡುವುದು ನಮ್ಮ ಉದ್ದೇಶ. ಪ್ರಮುಖ ಪ್ರವಾಸಿ ತಾಣಗಳಲ್ಲಿ ಈ ಯೋಜನೆ ಜಾರಿಯಾದರೆ ಅನೇಕರಿಗೆ ಅನುಕೂಲವಾಗುತ್ತದೆ. ಅಸಂಘಟಿತ ವ್ಯಾಪಾರಿಗಳಿಗೆ ಬದುಕು ಕಟ್ಟಿಕೊಡುವುದು, ಸರ್ಕಾರದ ವಿವಿಧ ಯೋಜನೆಗಳ ಅಡಿಗೆ ತರುವುದು ಇದರಿಂದ ಸಾಧ್ಯವಾಗುತ್ತದೆ. ಜತೆಗೆ, ಗುಣಮಟ್ಟದ ಆಹಾರವನ್ನು ನಾಗರಿಕರಿಗೆ ಪೂರೈಸಿದಂತೆಯೂ ಆಗುವುದು’ ಎಂದು ಮಾಹಿತಿ ನೀಡಿದರು.