<p><strong>ಮೈಸೂರು</strong>: ಬೆಲೆ ಏರಿಕೆ ವಿರೋಧಿಸಿ ಜುಲೈ 7 ರಂದು ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸೈಕಲ್ ಜಾಥಾ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ತಿಳಿಸಿದರು.</p>.<p>ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಅವರು ಭಾನುವಾರ ಸಹಾಯ ಹಸ್ತ ಕಾರ್ಯಕ್ರಮದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದರು.</p>.<p>ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜಾಥಾಕ್ಕೆ ಮೈಸೂರಿನಲ್ಲಿ ಚಾಲನೆ ನೀಡಲಿದ್ದಾರೆ. 5 ಕಿ.ಮೀವರೆಗೆ ಜಾಥಾ ಸಂಚರಿಸಲಿದೆ ಎಂದು ಅವರು ಹೇಳಿದರು.</p>.<p>ಸಹಾಯಹಸ್ತ ಕಾರ್ಯಕ್ರಮದ ಅಂಗವಾಗಿ ಪ್ರತಿ ಗ್ರಾಮ ಪಂಚಾಯಿತಿಗೆ 20 ಜನರನ್ನು ಕೊರೊನಾ ವಾರಿಯರ್ ಎಂದು ಆಯ್ಕೆ ಮಾಡಿ, ಅವರು ಕೊರೊನಾದಿಂದ ನೊಂದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಬೇಕು ಎಂದು ಅವರು ಹೇಳಿದರು.</p>.<p>ಬಹಳಷ್ಟು ಮಂದಿ ಕೊರೊನಾದಿಂದ ಮೃತಪಟ್ಟವರಿಗೆ ಕೋವಿಡ್ ಮರಣ ಪ್ರಮಾಣ ಪತ್ರ ನೀಡಿಲ್ಲ. ಹಾಗಾಗಿ ಸಾಂತ್ವನದ ಜತೆಯಲ್ಲಿ ಪರಿಷ್ಕೃತ ಮರಣಪ ಪ್ರಮಾಣ ಪತ್ರದ ಅರ್ಜಿಯನ್ನು ವಿತರಿಸಬೇಕು ಎಂದು ಸೂಚಿಸಿದರು.</p>.<p>ರಾಜ್ಯದಲ್ಲಿ 30 ಸಾವಿರ ಮಂದಿ ಕೋವಿಡ್ ನಿಂದ ಮೃತ ಪಟ್ಟಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ವಾಸ್ತವದಲ್ಲಿ 3.5 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಬೆಲೆ ಏರಿಕೆ ವಿರೋಧಿಸಿ ಜುಲೈ 7 ರಂದು ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸೈಕಲ್ ಜಾಥಾ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ತಿಳಿಸಿದರು.</p>.<p>ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಅವರು ಭಾನುವಾರ ಸಹಾಯ ಹಸ್ತ ಕಾರ್ಯಕ್ರಮದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದರು.</p>.<p>ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜಾಥಾಕ್ಕೆ ಮೈಸೂರಿನಲ್ಲಿ ಚಾಲನೆ ನೀಡಲಿದ್ದಾರೆ. 5 ಕಿ.ಮೀವರೆಗೆ ಜಾಥಾ ಸಂಚರಿಸಲಿದೆ ಎಂದು ಅವರು ಹೇಳಿದರು.</p>.<p>ಸಹಾಯಹಸ್ತ ಕಾರ್ಯಕ್ರಮದ ಅಂಗವಾಗಿ ಪ್ರತಿ ಗ್ರಾಮ ಪಂಚಾಯಿತಿಗೆ 20 ಜನರನ್ನು ಕೊರೊನಾ ವಾರಿಯರ್ ಎಂದು ಆಯ್ಕೆ ಮಾಡಿ, ಅವರು ಕೊರೊನಾದಿಂದ ನೊಂದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಬೇಕು ಎಂದು ಅವರು ಹೇಳಿದರು.</p>.<p>ಬಹಳಷ್ಟು ಮಂದಿ ಕೊರೊನಾದಿಂದ ಮೃತಪಟ್ಟವರಿಗೆ ಕೋವಿಡ್ ಮರಣ ಪ್ರಮಾಣ ಪತ್ರ ನೀಡಿಲ್ಲ. ಹಾಗಾಗಿ ಸಾಂತ್ವನದ ಜತೆಯಲ್ಲಿ ಪರಿಷ್ಕೃತ ಮರಣಪ ಪ್ರಮಾಣ ಪತ್ರದ ಅರ್ಜಿಯನ್ನು ವಿತರಿಸಬೇಕು ಎಂದು ಸೂಚಿಸಿದರು.</p>.<p>ರಾಜ್ಯದಲ್ಲಿ 30 ಸಾವಿರ ಮಂದಿ ಕೋವಿಡ್ ನಿಂದ ಮೃತ ಪಟ್ಟಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ವಾಸ್ತವದಲ್ಲಿ 3.5 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>