ಈ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್, 'ಮೈಸೂರು ಬೆಂಗಳೂರು ದಶಪಥ ಹೆದ್ದಾರಿ, ಜಿಲ್ಲಾಸ್ಪತ್ರೆ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಸಿದ್ದರಾಮಯ್ಯ ಅವಧಿಯಲ್ಲಿ ಜಾರಿಗೊಳಿಸಲಾಗಿದೆ. ಆದರೆ, ಸಂಸದರು ತಾವೇ ಕೆಲಸ ಮಾಡಿದ್ದೆಂದು ಮಾಧ್ಯಮಗಳ ಮುಂದೆ ಬಿಂಬಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದೆವು. ಆದರೆ, ಕತ್ತೆ, ಹಂದಿಗಳ ಜೊತೆಗೆ ಚರ್ಚೆ ನಡೆಸುವುದಿಲ್ಲ ಎಂದು ಪ್ರತಾಪಸಿಂಹ ತಿಳಿಸಿದ್ದರು. ಈ ಕಾರಣದಿಂದ ಕತ್ತೆ, ಹಂದಿ ಮೂಲಕ ಮೆರವಣಿಗೆಯಲ್ಲಿ ಸಾಗಿ ಅವರ ಕಚೇರಿಯಲ್ಲಿ ಸಂವಾದ ನಡೆಸಲಿದ್ದೇವೆ' ಎಂದು ಅವರು ತಿಳಿಸಿದರು.