ಆನೆಗಳ ಬಿಡಾರದಲ್ಲಿ ಆಲದ ಸೊಪ್ಪು, ಹಸಿರು ಹುಲ್ಲಿನ ಕಂತೆಗಳನ್ನು ಗಜಗಳಿಗೆ ಮಾವುತರು, ಕಾವಾಡಿಗರ ಮಕ್ಕಳು ನೀಡುತ್ತಿದ್ದರು. ‘ಅಭಿಮನ್ಯು’, ‘ಚೈತ್ರಾ’ ಜೊತೆಯಲ್ಲಿದ್ದರೆ, ಭುವನೇಶ್ವರಿ ದೇವಾಲಯದ ಪಕ್ಕದಲ್ಲಿರುವ ಶೆಡ್ನಲ್ಲಿ ಧನಂಜಯ–ಕಾವೇರಿ, ಮುಖ್ಯ ಶೆಡ್ನಲ್ಲಿ ಗೋಪಾಲಸ್ವಾಮಿ, ಭೀಮ, ಮಹೇಂದ್ರ, ಅರ್ಜುನ, ಲಕ್ಷ್ಮಿ ಇದ್ದರು.