ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಸರಾ ರಂಗೋತ್ಸವ’ಕ್ಕೆ ಚಾಲನೆ

Last Updated 25 ಸೆಪ್ಟೆಂಬರ್ 2022, 16:14 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ದಸರಾ ಅಂಗವಾಗಿ ರಂಗಾಯಣದಿಂದ ಆಯೋಜಿಸಿರುವ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ನೆನಪಿನ ‘ದಸರಾ ರಂಗೋತ್ಸವ’ಕ್ಕೆ ಭಾನುವಾರ ಚಾಲನೆ ದೊರೆಯಿತು.

ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆ ಅಧ್ಯಕ್ಷ ಸುರೇಶ್ ಬಾಬು ಉದ್ಘಾಟಿಸಿದರು. ಉಪ ನಿರ್ದೇಶಕಿ ನಿರ್ಮಲಾ ಮಠಪತಿ, ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಹಾಗೂ ರಂಗ ಸಮಾಜದ ಸದಸ್ಯ ಶೀನ ನಡೋಳಿ ಪಾಲ್ಗೊಂಡಿದ್ದರು.

ಬಳಿಕ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಕಥೆ, ಆರ್.ನಾಗೇಶ್ ನಿರ್ದೇಶನದ ‘ಕೃಷ್ಣೇಗೌಡನ ಆನೆ’ ನಾಟಕವನ್ನು ರಂಗಾಯಣ ರೆಪರ್ಟರಿ ತಂಡದವರು ಪ್ರದರ್ಶಿಸಿದರು. ಅ.4ರವರೆಗೆ ಪ್ರತಿ ನಿತ್ಯ ಸಂಜೆ 6.30ಕ್ಕೆ ‘ಭೂಮಿಗೀತ’ ರಂಗಮಂದಿರದಲ್ಲಿ ನಾಟಕಗಳ ಪ್ರದರ್ಶನ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT