ಮೈಸೂರು: ವಿಶ್ವವಿಖ್ಯಾತ ಜಂಬೂಸವಾರಿಗಾಗಿ ಇಲ್ಲಿನ ಅರಮನೆಯಲ್ಲಿ ಸಿದ್ದತಾ ಕಾರ್ಯಗಳು ಭರದಿಂದ ನಡೆದಿವೆ.
ವಿವಿಧ ಕಲಾತಂಡಗಳು ಅಲಂಕಾರ ಮೊದಲಾದ ಪ್ರಕ್ರಿಯೆಯಲ್ಲಿ ತೊಡಗಿವೆ. ಕೆಲವು ಸ್ತಬ್ಧಚಿತ್ರಗಳು ಈಗಾಗಲೇ ಅಣಿಗೊಂಡಿವೆ. ಅಂಬಾರಿಯ ಉತ್ಸವಮೂರ್ತಿಯ ಆಗಮನಕ್ಕೆ ಎದುರುನೋಡಲಾಗುತ್ತಿದೆ.
-ಚಾಮುಂಡೇಶ್ವರಿ ದೇವಿ
ಅಂಬಾರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಮೇಲೆ ವಿರಾಜಮಾನವಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಪುಷ್ಪಾರ್ಚನೆ ಮಾಡಿದರು.
ಅಲಂಕೃತ ವಾಹನದಲ್ಲಿ ನಾದಸ್ವರ ವಿವಿಧ ಕಲಾತಂಡಗಳ ಜೊತೆಗೆ ಬೆಟ್ಟದಲ್ಲಿ ಮೆರವಣಿಗೆ ಮಾಡಲಾಯಿತು.