ದೊಡ್ಡ ಮೈದಾನದಲ್ಲಿ ಸಾಲಾಗಿ ಬಂದು ಆಹಾರ ಪದಾರ್ಥಗಳನ್ನು ಖರೀದಿ ಮಾಡಲು ವ್ಯವಸ್ಥೆ ಮಾಡಲಾಗುವುದು ಪ್ರತಿದಿನ ಮನೆಯಿಂದ ಒಬ್ಬರು ಹೊರಬಂದು ದಿನಸಿ ವಸ್ತುಗಳನ್ನು ಖರೀದಿ ಮಾಡಬೇಕು ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ಕೆ ಚಿಂತನೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತಾ ತಿಳಿಸಿದರು.