ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಬೆಂಗಳೂರಿನಿಂದ ಬಂದವರು ಹೊರಬಾರದಂತೆ ಜಿಲ್ಲಾಧಿಕಾರಿ ಸೂಚನೆ

Last Updated 25 ಮಾರ್ಚ್ 2020, 16:52 IST
ಅಕ್ಷರ ಗಾತ್ರ

ಮೈಸೂರು: ನಿತ್ಯದ ಅಗತ್ಯ ವಸ್ತುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಬುಧವಾರ ತಿಳಿಸಿದರು.

ಬೆಂಗಳೂರಿನಿಂದ ಮೈಸೂರಿಗೆ ಸಾವಿರಾರು ಜನರು ಬಂದಿದ್ದಾರೆ ಅವರೆಲ್ಲರೂ ಮನೆಯಿಂದ ಹೊರಬರದೆ ಮನೆಯಲ್ಲಿ ಉಳಿದುಕೊಳ್ಳಬೇಕು. ಕೊರೊನ ಸೋಂಕಿನ ಲಕ್ಷಣಗಳಿದ್ದರೆ ಮಾತ್ರ ಆಸ್ಪತ್ರೆಗೆ ಬರಬೇಕು ಎಂದು ಫೇಸ್‌ಬುಕ್ ಲೈವ್‌ನಲ್ಲಿ ತಿಳಿಸಿದ್ದಾರೆ.

ಅಂಗಡಿಗಳಲ್ಲಿ ದಿನಸಿ ಖರೀದಿ ಮಾಡುವ ವೇಳೆ ಸಾಲಾಗಿ ಬಂದು ಅಗತ್ಯ ವಸ್ತುಗಳನ್ನು ಖರೀದಿ ಮಾಡಬೇಕು ಎಂದು ಸೂಚಿಸಿದ್ದಾರೆ‌.

ದೊಡ್ಡ ಮೈದಾನದಲ್ಲಿ ಸಾಲಾಗಿ ಬಂದು ಆಹಾರ ಪದಾರ್ಥಗಳನ್ನು ಖರೀದಿ ಮಾಡಲು ವ್ಯವಸ್ಥೆ ಮಾಡಲಾಗುವುದು ಪ್ರತಿದಿನ ಮನೆಯಿಂದ ಒಬ್ಬರು ಹೊರಬಂದು ದಿನಸಿ ವಸ್ತುಗಳನ್ನು ಖರೀದಿ ಮಾಡಬೇಕು ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ಕೆ ಚಿಂತನೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತಾ ತಿಳಿಸಿದರು.

ಕೃಷಿ ಮಾರುಕಟ್ಟೆ ಆವರಣದಲ್ಲಿ ಕೆಲಸ ಮಾಡುವವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಪಾಸ್ ನೀಡಲಾಗುವುದು ಹಾಗೂ ಹೊರ ರಾಜ್ಯಗಳಿಂದ ಬರುವ ವಾಹನ ಚಾಲಕರ ಮೇಲೆ ನಿಗಾ ಇಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಶ್ಯಂತ್ ತಿಳಿಸಿದರು.

ಈ ಸಂದರ್ಭದಲ್ಲಿ ಕಾನೂ‌ನು ಮತ್ತು ಸುವ್ಯವಸ್ಥೆ ಡಿಸಿಪಿ ಡಾ. ಪ್ರಕಾಶ್ ಗೌಡ ಅವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT