<p><strong>ಮೈಸೂರು:</strong> ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮತ್ತು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದೆ.</p>.<p>ವಿಧಾನಸಭಾ ಕಾಗದ ಪತ್ರಗಳ ಸಮಿತಿಯ ಅಧ್ಯಕ್ಷ ಸಾ.ರಾ. ಮಹೇಶ್ ನೇತೃತ್ವದಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ಸಭೆ ನಡೆಯಿತು. ರೋಹಿಣಿ ಸಿಂಧೂರಿ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>ಸಭೆಯ ಆರಂಭದಲ್ಲಿ ಮಾತನಾಡಿದ ಸಾ.ರಾ.ಮಹೇಶ್, ‘ವಿಧಾನ ಸಭೆಯ ಸ್ಪೀಕರ್ ಪರವಾಗಿ ಸಮಿತಿಯ ಸದಸ್ಯರು ಇಲ್ಲಿಗೆ ಬಂದಿದ್ದಾರೆ. ಜಿಲ್ಲಾಧಿಕಾರಿ, ಎಸ್ಪಿ ಅಥವಾ ಪೊಲೀಸ್ ಆಯುಕ್ತರು ಸಮಿತಿಯ ಸದಸ್ಯರನ್ನು ಸ್ವಾಗತಿಸಬೇಕಿತ್ತು. ಆದರೆ ಇಲ್ಲಿ ಬರಮಾಡಿಕೊಳ್ಳಲು ಯಾರೂ ಇರಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮಾಸ್ಕ್ ತೆಗೆದು ಮಾತನಾಡಿ: ಸಭೆಯ ಆರಂಭದಲ್ಲಿ ಎಲ್ಲ ಅಧಿಕಾರಿಗಳು ಪರಿಚಯ ಮಾಡಿಕೊಂಡರು. ರೋಹಿಣಿ ಸಿಂಧೂರಿ ಕೂಡಾ ತಮ್ಮನ್ನು ಪರಿಚಯ ಮಾಡಿಕೊಂಡು, ‘ಈ ಸಭೆಯಲ್ಲಿ ನನ್ನ ಕಚೇರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ಇಲ್ಲ. ನಾನು ಇರಬೇಕೇ, ಬೇಡವೇ’ ಎಂದು ಕೇಳಿದರು.</p>.<p>ಜಿಲ್ಲಾಧಿಕಾರಿಯ ಮಾತು ಸರಿಯಾಗಿ ಕೇಳಿಸದಿದ್ದಕ್ಕೆ ಶಾಸಕರು, ‘ಮಾಸ್ಕ್ ತೆಗೆದು ಮಾತನಾಡಿರಿ’ ಎಂದರು. ಆದರೆ ಜಿಲ್ಲಾಧಿಕಾರಿ, ‘ಮಾಸ್ಕ್ ತೆಗೆಯಲ್ಲ ಸರ್, ಮಾಸ್ಕ್ ತೆಗೆಯಬಾರದು’ ಎಂದು ಹೇಳಿ ಮಾತು ಮುಂದುವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮತ್ತು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದೆ.</p>.<p>ವಿಧಾನಸಭಾ ಕಾಗದ ಪತ್ರಗಳ ಸಮಿತಿಯ ಅಧ್ಯಕ್ಷ ಸಾ.ರಾ. ಮಹೇಶ್ ನೇತೃತ್ವದಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ಸಭೆ ನಡೆಯಿತು. ರೋಹಿಣಿ ಸಿಂಧೂರಿ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>ಸಭೆಯ ಆರಂಭದಲ್ಲಿ ಮಾತನಾಡಿದ ಸಾ.ರಾ.ಮಹೇಶ್, ‘ವಿಧಾನ ಸಭೆಯ ಸ್ಪೀಕರ್ ಪರವಾಗಿ ಸಮಿತಿಯ ಸದಸ್ಯರು ಇಲ್ಲಿಗೆ ಬಂದಿದ್ದಾರೆ. ಜಿಲ್ಲಾಧಿಕಾರಿ, ಎಸ್ಪಿ ಅಥವಾ ಪೊಲೀಸ್ ಆಯುಕ್ತರು ಸಮಿತಿಯ ಸದಸ್ಯರನ್ನು ಸ್ವಾಗತಿಸಬೇಕಿತ್ತು. ಆದರೆ ಇಲ್ಲಿ ಬರಮಾಡಿಕೊಳ್ಳಲು ಯಾರೂ ಇರಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮಾಸ್ಕ್ ತೆಗೆದು ಮಾತನಾಡಿ: ಸಭೆಯ ಆರಂಭದಲ್ಲಿ ಎಲ್ಲ ಅಧಿಕಾರಿಗಳು ಪರಿಚಯ ಮಾಡಿಕೊಂಡರು. ರೋಹಿಣಿ ಸಿಂಧೂರಿ ಕೂಡಾ ತಮ್ಮನ್ನು ಪರಿಚಯ ಮಾಡಿಕೊಂಡು, ‘ಈ ಸಭೆಯಲ್ಲಿ ನನ್ನ ಕಚೇರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ಇಲ್ಲ. ನಾನು ಇರಬೇಕೇ, ಬೇಡವೇ’ ಎಂದು ಕೇಳಿದರು.</p>.<p>ಜಿಲ್ಲಾಧಿಕಾರಿಯ ಮಾತು ಸರಿಯಾಗಿ ಕೇಳಿಸದಿದ್ದಕ್ಕೆ ಶಾಸಕರು, ‘ಮಾಸ್ಕ್ ತೆಗೆದು ಮಾತನಾಡಿರಿ’ ಎಂದರು. ಆದರೆ ಜಿಲ್ಲಾಧಿಕಾರಿ, ‘ಮಾಸ್ಕ್ ತೆಗೆಯಲ್ಲ ಸರ್, ಮಾಸ್ಕ್ ತೆಗೆಯಬಾರದು’ ಎಂದು ಹೇಳಿ ಮಾತು ಮುಂದುವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>