ಈ ಮಧ್ಯೆ ‘ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿರುವ ಟಿಬೆಟೆನ್ಗಳನ್ನು ಭೇಟಿ ಮಾಡಿದರೆ, ಅವರ ಸಮೀಪ ಸುಳಿದಾಡಿದರೆ ಕೊರೊನಾ ಬರುತ್ತದೆ. ಹಾಗಾಗಿ, ಅವರಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ’ ಎಂಬ ಸಂದೇಶವೂ ವಾಟ್ಸ್ಆ್ಯಪ್ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಸಂದೇಶ ಸುಳ್ಳು ಎಂದು ಸ್ಪಷ್ಟಪಡಿಸಿರುವ ಪೊಲೀಸರು ಇಂತಹ ಸಂದೇಶ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.