ಪಿರಿಯಾಪಟ್ಟಣ (ಮೈಸೂರು): ತಾಲ್ಲೂಕಿನ ಸನ್ಯಾಸಿಪುರ ಗ್ರಾಮದ ಎಸ್.ಎಂ.ಕರಿಗೌಡ (55)ಸಾಲ ಬಾಧೆ ತಾಳಲಾರದೇ ಗುರುವಾರ ರಾತ್ರಿ ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರಿಗೌಡ ಅವರಿಗೆ ಏಳು ಎಕರೆ ಜಮೀನಿದ್ದು, ಬ್ಯಾಂಕ್ ಹಾಗೂ ಖಾಸಗಿ ವ್ಯಕ್ತಿಗಳಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಮನೆಯಲ್ಲಿ ಜೋಳದ ಬೆಳೆಗೆ ಉಪಯೋಗಿಸುವ ವಿಷದ ಮಾತ್ರೆಯನ್ನು ಸೇವಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರ ಪತ್ನಿ ಶಿವಮ್ಮ ಪಟ್ಟಣ ಠಾಣೆಗೆ ದೂರು ನೀಡಿದ್ದಾರೆ.