<p><strong>ಮೈಸೂರು:</strong> ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆ ಮಂಗಳವಾರ ಆರಂಭವಾದ ಕೂಡಲೆ ಗದ್ದಲದ ವಾತಾವರಣ ಸೃಷ್ಟಿಯಾಗಿದೆ.</p>.<p>ಪಾಲಿಕೆ ಸದಸ್ಯರಾದ ಪ್ರಮೀಳಾ ಭರತ್ ಅವರು ಪೌರಕಾರ್ಮಿಕರ ಕೊರತೆ ಕುರಿತು ವಿಷಯ ಪ್ರಸ್ತಾಪಿಸಿದಾಗ ಗದ್ದಲ ಮೂಡಿತು. ಮೊದಲು ವಾರ್ಡಿನ ಸಮಸ್ಯೆಗಳನ್ನು ಕುರಿತು ಚರ್ಚೆ ನಡೆಸಬೇಕು ಎಂದು ಸದಸ್ಯರು ಪಟ್ಟು ಹಿಡಿದಿದ್ದಾರೆ.</p>.<p><strong>ಕಾರ್ಯಸೂಚಿ ಬದಲಿಗೆ ಸಾಮಾನ್ಯ ವಿಷಯ ಚರ್ಚೆಗೆ ಅವಕಾಶ</strong></p>.<p>ಸದಸ್ಯರ ಒತ್ತಾಯಕ್ಕೆ ಮಣಿದ ಪ್ರಭಾರ ಮೇಯರ್ ಅನ್ವರ್ ಬೇಗ್ ಕಾರ್ಯಸೂಚಿಯ ಬದಲಿಗೆ ಸಾಮಾನ್ಯ ವಿಷಯ ಚರ್ಚೆಗೆ ಅವಕಾಶ ಮಾಡಿಕೊಟ್ಟರು.ಮೊದಲಿಗೆ ಪೌರಕಾರ್ಮಿಕರ ಕೊರತೆ ವಿಷಯವನ್ನುಸದಸ್ಯರಾದ ಸುನಂದಾ ಫಾಲನೇತ್ರ, ಪ್ರಮೀಳಾ ಭರತ್, ಲಕ್ಷ್ಮಿ, ಕೆ.ವಿ.ಶ್ರೀಧರ್, ಪ್ರೇಮಾ ಶಂಕರೇಗೌಡ ಮಾತನಾಡಿದರು.</p>.<p><strong>ಬಿಜೆಪಿ- ಕಾಂಗ್ರೆಸ್ ಸದಸ್ಯರ ಮಧ್ಯೆ ವಾಗ್ವಾದ</strong></p>.<p>ಪ್ರಧಾನಮಂತ್ರಿ ನರೇಂದ್ರಮೋದಿ ಪೌರಕಾರ್ಮಿಕರ ಪಾದ ತೊಳೆದು ಪೂಜಿಸಿದರು ಎಂಬ ಬಿಜೆಪಿ ಸದಸ್ಯರ ಮಾತಿಗೆ ಕೆಲವು ಸದಸ್ಯರು ಮತಗೋಸ್ಕರ ಏನು ಬೇಕಾದರೂ ಮಾಡುತ್ತಾರೆ ಎಂದು ಪ್ರತಿಕ್ರಿಯಿಸಿದರು.ಈ ವಿಷಯ ಕುರಿತು ಬಿಜೆಪಿ ಸದಸ್ಯರು ಮೆಯರ್ ಪೀಠದ ಮುಂದೆ ಜಮಾಯಿಸಿ ಘೋಷಣೆಗಳನ್ನು ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆ ಮಂಗಳವಾರ ಆರಂಭವಾದ ಕೂಡಲೆ ಗದ್ದಲದ ವಾತಾವರಣ ಸೃಷ್ಟಿಯಾಗಿದೆ.</p>.<p>ಪಾಲಿಕೆ ಸದಸ್ಯರಾದ ಪ್ರಮೀಳಾ ಭರತ್ ಅವರು ಪೌರಕಾರ್ಮಿಕರ ಕೊರತೆ ಕುರಿತು ವಿಷಯ ಪ್ರಸ್ತಾಪಿಸಿದಾಗ ಗದ್ದಲ ಮೂಡಿತು. ಮೊದಲು ವಾರ್ಡಿನ ಸಮಸ್ಯೆಗಳನ್ನು ಕುರಿತು ಚರ್ಚೆ ನಡೆಸಬೇಕು ಎಂದು ಸದಸ್ಯರು ಪಟ್ಟು ಹಿಡಿದಿದ್ದಾರೆ.</p>.<p><strong>ಕಾರ್ಯಸೂಚಿ ಬದಲಿಗೆ ಸಾಮಾನ್ಯ ವಿಷಯ ಚರ್ಚೆಗೆ ಅವಕಾಶ</strong></p>.<p>ಸದಸ್ಯರ ಒತ್ತಾಯಕ್ಕೆ ಮಣಿದ ಪ್ರಭಾರ ಮೇಯರ್ ಅನ್ವರ್ ಬೇಗ್ ಕಾರ್ಯಸೂಚಿಯ ಬದಲಿಗೆ ಸಾಮಾನ್ಯ ವಿಷಯ ಚರ್ಚೆಗೆ ಅವಕಾಶ ಮಾಡಿಕೊಟ್ಟರು.ಮೊದಲಿಗೆ ಪೌರಕಾರ್ಮಿಕರ ಕೊರತೆ ವಿಷಯವನ್ನುಸದಸ್ಯರಾದ ಸುನಂದಾ ಫಾಲನೇತ್ರ, ಪ್ರಮೀಳಾ ಭರತ್, ಲಕ್ಷ್ಮಿ, ಕೆ.ವಿ.ಶ್ರೀಧರ್, ಪ್ರೇಮಾ ಶಂಕರೇಗೌಡ ಮಾತನಾಡಿದರು.</p>.<p><strong>ಬಿಜೆಪಿ- ಕಾಂಗ್ರೆಸ್ ಸದಸ್ಯರ ಮಧ್ಯೆ ವಾಗ್ವಾದ</strong></p>.<p>ಪ್ರಧಾನಮಂತ್ರಿ ನರೇಂದ್ರಮೋದಿ ಪೌರಕಾರ್ಮಿಕರ ಪಾದ ತೊಳೆದು ಪೂಜಿಸಿದರು ಎಂಬ ಬಿಜೆಪಿ ಸದಸ್ಯರ ಮಾತಿಗೆ ಕೆಲವು ಸದಸ್ಯರು ಮತಗೋಸ್ಕರ ಏನು ಬೇಕಾದರೂ ಮಾಡುತ್ತಾರೆ ಎಂದು ಪ್ರತಿಕ್ರಿಯಿಸಿದರು.ಈ ವಿಷಯ ಕುರಿತು ಬಿಜೆಪಿ ಸದಸ್ಯರು ಮೆಯರ್ ಪೀಠದ ಮುಂದೆ ಜಮಾಯಿಸಿ ಘೋಷಣೆಗಳನ್ನು ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>