ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಹೆಣ್ಣಾನೆ ‘ಚಾಮುಂಡಿ’ ದತ್ತು ಪಡೆದ ಸಚಿವ ಸೋಮಶೇಖರ್

Last Updated 22 ಏಪ್ರಿಲ್ 2020, 10:36 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ಮೃಗಾಲಯದಲ್ಲಿರುವ ಚಾಮುಂಡಿ ಎಂಬ 5 ವರ್ಷದ ಹೆಣ್ಣಾನೆಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ದತ್ತು ಪಡೆದರು.

ಬುಧವಾರ ಮೃಗಾಲಯಕ್ಕೆ ಭೇಟಿ ನೀಡಿದ ಅವರು, ದತ್ತು ಪ್ರಕ್ರಿಯೆ ಯೋಜನೆಯಡಿ ₹ 1. 75 ಲಕ್ಷ ನೀಡುವ ಮೂಲಕ ಒಂದು ವರ್ಷದ ಅವಧಿಗೆ ದತ್ತು ಪಡೆದರು.

ಇದೇ ವೇಳೆ, 16 ಹುಲಿಗಳಿಗೆ ಮಾಂಸಾಹಾರ ನೀಡಲು ಒಂದು ದಿನ ವೆಚ್ಚವಾದ ₹ 25 ಸಾವಿರವನ್ನು ವೈಯಕ್ತಿಕವಾಗಿ ನೀಡಿದರು.

ಕೊರೊನಾ ಹಿನ್ನೆಲೆಯಲ್ಲಿ ಕೈಗೊಡಿರುವ ಮುನ್ನೆಚ್ಚರಿಕೆ ಕ್ರಮಗಳು, ಆಹಾರ, ಕುಡಿಯುವ ನೀರು, ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT