<p><strong>ಮೈಸೂರು</strong>: ಹೈಕೋರ್ಟ್ ತೀರ್ಪಿನನ್ವಯ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದಾಗಿದೆ.</p>.<p>ಕೆಲ ದಿನದ ಹಿಂದಷ್ಟೇ ಹೈಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ತೀರ್ಪಿನ ಪ್ರತಿ ಮಂಗಳವಾರ ರಾತ್ರಿ ಮಹಾನಗರ ಪಾಲಿಕೆ ಕಚೇರಿಗೆ ತಲುಪಿತ್ತು.</p>.<p>ಬುಧವಾರ ಬೆಳಿಗ್ಗೆ ಪಾಲಿಕೆ ಆಯುಕ್ತೆ ಶಿಲ್ಪಾನಾಗ್, ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್ ಅವರನ್ನು ಭೇಟಿಯಾಗಿ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚಿಸಿದರು.</p>.<p>ಚರ್ಚೆಯ ಬಳಿಕ ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಶಿಲ್ಪಾನಾಗ್, ‘ಮೇಯರ್ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದಾಗಿದೆ. ಜೂನ್ 11ಕ್ಕೆ ಮೇಯರ್ ಚುನಾವಣೆಯನ್ನು ಪ್ರಾದೇಶಿಕ ಆಯುಕ್ತರು ಘೋಷಿಸಿದ್ದಾರೆ. ಅಲ್ಲಿಯ ತನಕ ಉಪ ಮೇಯರ್ ಪಾಲಿಕೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ’ ಎಂದು ಹೇಳಿದರು.</p>.<p>ಮಹಾನಗರ ಪಾಲಿಕೆಯ ಸದಸ್ಯರ ಚುನಾವಣೆಯಲ್ಲಿ ರುಕ್ಮಿಣಿ ವಿರುದ್ಧ ಸ್ಪರ್ಧಿಸಿದ್ದ ರಜಿನಿ ಅಣ್ಣಯ್ಯ ಫಲಿತಾಂಶ ಪ್ರಕಟಗೊಂಡ ಬಳಿಕ, ರುಕ್ಮಿಣಿ ತಮ್ಮ ಆದಾಯದ ಮೂಲ ಮುಚ್ಚಿಟ್ಟಿದ್ದಾರೆ ಎಂದು ಜಿಲ್ಲಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.</p>.<p>ನ್ಯಾಯಾಲಯ ಸದಸ್ಯತ್ವವನ್ನೇ ರದ್ದುಗೊಳಿಸಿ, ಎರಡನೇ ಸ್ಥಾನದಲ್ಲಿದ್ದ ರಜಿನಿ ಅವರನ್ನೇ ಸದಸ್ಯರನ್ನಾಗಿ ಪರಿಗಣಿಸಬೇಕು ಎಂದು ಆದೇಶಿಸಿತ್ತು.</p>.<p>ಇದನ್ನು ಪ್ರಶ್ನಿಸಿ ರುಕ್ಮಿಣಿ ಮಾದೇಗೌಡ ಹೈಕೋರ್ಟ್ ಮೊರೆಯೊಕ್ಕಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ರುಕ್ಮಿಣಿ ಸದಸ್ಯತ್ವ ಅನರ್ಹತೆಗೊಳಿಸಿ, ವಾರ್ಡ್ನಲ್ಲಿ ಹೊಸದಾಗಿ ಚುನಾವಣೆ ನಡೆಸುವಂತೆ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಹೈಕೋರ್ಟ್ ತೀರ್ಪಿನನ್ವಯ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದಾಗಿದೆ.</p>.<p>ಕೆಲ ದಿನದ ಹಿಂದಷ್ಟೇ ಹೈಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ತೀರ್ಪಿನ ಪ್ರತಿ ಮಂಗಳವಾರ ರಾತ್ರಿ ಮಹಾನಗರ ಪಾಲಿಕೆ ಕಚೇರಿಗೆ ತಲುಪಿತ್ತು.</p>.<p>ಬುಧವಾರ ಬೆಳಿಗ್ಗೆ ಪಾಲಿಕೆ ಆಯುಕ್ತೆ ಶಿಲ್ಪಾನಾಗ್, ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್ ಅವರನ್ನು ಭೇಟಿಯಾಗಿ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚಿಸಿದರು.</p>.<p>ಚರ್ಚೆಯ ಬಳಿಕ ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಶಿಲ್ಪಾನಾಗ್, ‘ಮೇಯರ್ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದಾಗಿದೆ. ಜೂನ್ 11ಕ್ಕೆ ಮೇಯರ್ ಚುನಾವಣೆಯನ್ನು ಪ್ರಾದೇಶಿಕ ಆಯುಕ್ತರು ಘೋಷಿಸಿದ್ದಾರೆ. ಅಲ್ಲಿಯ ತನಕ ಉಪ ಮೇಯರ್ ಪಾಲಿಕೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ’ ಎಂದು ಹೇಳಿದರು.</p>.<p>ಮಹಾನಗರ ಪಾಲಿಕೆಯ ಸದಸ್ಯರ ಚುನಾವಣೆಯಲ್ಲಿ ರುಕ್ಮಿಣಿ ವಿರುದ್ಧ ಸ್ಪರ್ಧಿಸಿದ್ದ ರಜಿನಿ ಅಣ್ಣಯ್ಯ ಫಲಿತಾಂಶ ಪ್ರಕಟಗೊಂಡ ಬಳಿಕ, ರುಕ್ಮಿಣಿ ತಮ್ಮ ಆದಾಯದ ಮೂಲ ಮುಚ್ಚಿಟ್ಟಿದ್ದಾರೆ ಎಂದು ಜಿಲ್ಲಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.</p>.<p>ನ್ಯಾಯಾಲಯ ಸದಸ್ಯತ್ವವನ್ನೇ ರದ್ದುಗೊಳಿಸಿ, ಎರಡನೇ ಸ್ಥಾನದಲ್ಲಿದ್ದ ರಜಿನಿ ಅವರನ್ನೇ ಸದಸ್ಯರನ್ನಾಗಿ ಪರಿಗಣಿಸಬೇಕು ಎಂದು ಆದೇಶಿಸಿತ್ತು.</p>.<p>ಇದನ್ನು ಪ್ರಶ್ನಿಸಿ ರುಕ್ಮಿಣಿ ಮಾದೇಗೌಡ ಹೈಕೋರ್ಟ್ ಮೊರೆಯೊಕ್ಕಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ರುಕ್ಮಿಣಿ ಸದಸ್ಯತ್ವ ಅನರ್ಹತೆಗೊಳಿಸಿ, ವಾರ್ಡ್ನಲ್ಲಿ ಹೊಸದಾಗಿ ಚುನಾವಣೆ ನಡೆಸುವಂತೆ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>