ಮೈಸೂರು: ಚಿತ್ರನಟ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಪ್ರತಿವರ್ಷ ಯುವ ನಾಯಕ ರಾಜ್ಯ ಪ್ರಶಸ್ತಿ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಒತ್ತಾಯಿಸಿದರು.
ಅಪೂರ್ವ ಸ್ನೇಹ ಬಳಗ ಹಾಗೂ ಕೃಷ್ಣರಾಜ ಯುವ ಬಳಗವು ಇಲ್ಲಿನ ಚಾಮುಂಡಿಪುರಂ ವೃತ್ತದಲ್ಲಿ ಶನಿವಾರ ಏರ್ಪಡಿಸಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಚಿತ್ರರಂಗದ ಅಭಿನಯದ ಜೊತೆಗೆ ಸಾಮಾಜಿಕವಾಗಿ ಹಲವು ಸಂಘ ಸಂಸ್ಥೆಗಳಿಗೆ ಒತ್ತಾಸೆಯಾಗಿ ನಿಂತಿದ್ದು ಅಂಥವರು ತಮ್ಮ ವೃತ್ತಿ ಬದುಕಿನ ಜೊತೆಗೆ ಕನ್ನಡದ ನಾಡುನುಡಿಯ ಅಭಿವೃದ್ದಿಗೂ ಕೂಡ ತಮ್ಮನ್ನು ಸಮರ್ಪಿಸಿಕೊಂಡವರು ಎಂದು ಸ್ಮರಿಸಿದರು