<p><strong>ಮೈಸೂರು: </strong>ಆಲನಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೂವರು ಅಪಹರಣಕಾರರಾದ ಮಂಜುನಾಥ (29), ನಾಗರಾಜು (25) ಹಾಗೂ ನವೀನ್ (32) ಎಂಬುವವರನ್ನು ಕೇವಲ ಒಂದೇ ಗಂಟೆಯಲ್ಲೇ ಬಂಧಿಸಿದ್ದಾರೆ.</p>.<p>ಇವರು ದೇವೇಗೌಡ ವೃತ್ತದಲ್ಲಿ ಯಶವಂತ ಎಂಬುವವರನ್ನು ಅಪಹರಿಸಿ ಅವರ ಸೋದರ ಮನು ಅವರ ಬಳಿ ₹ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಎಸಿಪಿ ಶಶಿಧರ್ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಎಚ್.ಹರಿಯಪ್ಪ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿತು.</p>.<p><strong>ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೈದಿಗಳಿಗೆ 7 ವರ್ಷ ಶಿಕ್ಷೆ</strong></p>.<p>ಆಸ್ಪತ್ರೆಯಲ್ಲಿ ದಾಖಲಾಗಿ ತಪ್ಪಿಸಿಕೊಂಡಿದ್ದ ಸುನೀಲ್ ಮತ್ತು ಸತೀಶ್ ಎಂಬ ಕೈದಿಗಳಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ 7 ವರ್ಷ ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿದೆ.</p>.<p>ಆಸ್ಪತ್ರೆಯಲ್ಲಿ ಮೂರ್ಛೆರೋಗ ಬಂದವರಂತೆ ನಟಿಸಿ ಇವರು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ನ್ಯಾಯಾಧೀಶರಾದ ಜೆರಾಲ್ಡ್ ರುಡಾಲ್ ಮೆಂಡೋನ್ಸಾ ಅವರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್.ಡಿ.ಆನಂದ ಕುಮಾರ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಆಲನಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೂವರು ಅಪಹರಣಕಾರರಾದ ಮಂಜುನಾಥ (29), ನಾಗರಾಜು (25) ಹಾಗೂ ನವೀನ್ (32) ಎಂಬುವವರನ್ನು ಕೇವಲ ಒಂದೇ ಗಂಟೆಯಲ್ಲೇ ಬಂಧಿಸಿದ್ದಾರೆ.</p>.<p>ಇವರು ದೇವೇಗೌಡ ವೃತ್ತದಲ್ಲಿ ಯಶವಂತ ಎಂಬುವವರನ್ನು ಅಪಹರಿಸಿ ಅವರ ಸೋದರ ಮನು ಅವರ ಬಳಿ ₹ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಎಸಿಪಿ ಶಶಿಧರ್ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಎಚ್.ಹರಿಯಪ್ಪ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿತು.</p>.<p><strong>ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೈದಿಗಳಿಗೆ 7 ವರ್ಷ ಶಿಕ್ಷೆ</strong></p>.<p>ಆಸ್ಪತ್ರೆಯಲ್ಲಿ ದಾಖಲಾಗಿ ತಪ್ಪಿಸಿಕೊಂಡಿದ್ದ ಸುನೀಲ್ ಮತ್ತು ಸತೀಶ್ ಎಂಬ ಕೈದಿಗಳಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ 7 ವರ್ಷ ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿದೆ.</p>.<p>ಆಸ್ಪತ್ರೆಯಲ್ಲಿ ಮೂರ್ಛೆರೋಗ ಬಂದವರಂತೆ ನಟಿಸಿ ಇವರು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ನ್ಯಾಯಾಧೀಶರಾದ ಜೆರಾಲ್ಡ್ ರುಡಾಲ್ ಮೆಂಡೋನ್ಸಾ ಅವರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್.ಡಿ.ಆನಂದ ಕುಮಾರ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>