ನಗರದ ಸಿದ್ದಾರ್ಥ ಬಡಾವಣೆಯಲ್ಲಿ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದು ಆತಂಕ ಸೃಷ್ಟಿಸಿತು. ಸ್ಥಳಕ್ಕೆ ಬಂದ ಸೆಸ್ಕ್ ತಂಡವು ಇದನ್ನು ತೆರವುಗೊಳಿಸಿತು. ಉಳಿದಂತೆ, ನಗರದ ಕೆಲವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿತು. ರಸ್ತೆಗಳಲ್ಲಿ ಮೊಟಕಾಲುದ್ದ ನೀರು ಹರಿಯುತ್ತಿದ್ದುದ್ದರಿಂದ ವಾಹನ ಸವಾರರು ಪರದಾಡಿದರು.