<p><strong>ಮೈಸೂರು: </strong>ಜಿಲ್ಲೆಯಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ಬಿಸಿಲಿನ ಝಳವನ್ನು ಸ್ವಲ್ಪಮಟ್ಟಿಗೆ ತಗ್ಗಿಸಿತು.</p>.<p>ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ತಾಪ ಹೆಚ್ಚಿತ್ತು. ಸೆಖೆಯ ವಾತಾವರಣದಿಂದ ಜನರು ಬಸವಳಿದಿದ್ದರು. ಸಂಜೆ ಹೊತ್ತಿಗೆ ದಟ್ಟ ಮೋಡಗಳು ಆವರಿಸಿದವು. ರಾತ್ರಿ ವೇಳೆಗೆ ಮಿಂಚು ಗುಡುಗು ಸಹಿತ ಜೋರು ಮಳೆಯಾಯಿತು.</p>.<p>ಮೈಸೂರು ತಾಲ್ಲೂಕಿನ ಜಯಪುರದಲ್ಲಿ ಗಾಳಿ ಸಹಿತ ಮಳೆ ಸುಮಾರು 1.6 ಸೆಂ.ಮೀನಷ್ಟು ಸುರಿಯಿತು.</p>.<p>ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಹೆಚ್ಚಿನ ಮಳೆಯಾಗಿದೆ. 5 ಸೆಂ.ಮೀನಷ್ಟು ಇಲ್ಲಿ ಮಳೆ ಬಿದ್ದಿದ್ದರೆ, ಕೆ.ಆರ್.ನಗರ ತಾಲ್ಲೂಕಿನಲ್ಲಿ 3.8, ತಿ.ನರಸೀಪುರ ತಾಲ್ಲೂಕಿನಲ್ಲಿ 2.8, ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ 2.7 ಸೆಂ.ಮೀನಷ್ಟು ಮಳೆ ಭಾನುವಾರ ರಾತ್ರಿ 9 ಗಂಟೆಯವರೆಗೆ ಆಗಿತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.</p>.<p>ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ಚಿಲ್ಕುಂದ ಗ್ರಾಮದಲ್ಲಿ ಮಳೆಗೆ ಹಲವು ಮನೆಗಳ ಚಾವಣಿಗಳು ಹಾರಿಹೋಗಿವೆ. ಹಲವು ಮರಗಳು ಧರೆಗುರುಳಿವೆ. ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ತೆಂಗು, ಅಡಿಕೆ ಮರಗಳು ನೆಲಕಚ್ಚಿವೆ.</p>.<p>ಜೋರು ಮಳೆಗೆ ಗುಲ್ಮೊಹರ್ ಮರದಲ್ಲಿ ಅರಳಿದ್ದ ಹೂಗಳು ಬಿದ್ದು, ರಸ್ತೆಯಲ್ಲಿ ಕೆಂಪು ಹಾಸಿಗೆ ಹಾಸಿದಂತೆ ಕಂಡಿತು. ನಗರದಲ್ಲಿ ತಂಪಾದ ವಾತಾವರಣ ಮೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಜಿಲ್ಲೆಯಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ಬಿಸಿಲಿನ ಝಳವನ್ನು ಸ್ವಲ್ಪಮಟ್ಟಿಗೆ ತಗ್ಗಿಸಿತು.</p>.<p>ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ತಾಪ ಹೆಚ್ಚಿತ್ತು. ಸೆಖೆಯ ವಾತಾವರಣದಿಂದ ಜನರು ಬಸವಳಿದಿದ್ದರು. ಸಂಜೆ ಹೊತ್ತಿಗೆ ದಟ್ಟ ಮೋಡಗಳು ಆವರಿಸಿದವು. ರಾತ್ರಿ ವೇಳೆಗೆ ಮಿಂಚು ಗುಡುಗು ಸಹಿತ ಜೋರು ಮಳೆಯಾಯಿತು.</p>.<p>ಮೈಸೂರು ತಾಲ್ಲೂಕಿನ ಜಯಪುರದಲ್ಲಿ ಗಾಳಿ ಸಹಿತ ಮಳೆ ಸುಮಾರು 1.6 ಸೆಂ.ಮೀನಷ್ಟು ಸುರಿಯಿತು.</p>.<p>ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಹೆಚ್ಚಿನ ಮಳೆಯಾಗಿದೆ. 5 ಸೆಂ.ಮೀನಷ್ಟು ಇಲ್ಲಿ ಮಳೆ ಬಿದ್ದಿದ್ದರೆ, ಕೆ.ಆರ್.ನಗರ ತಾಲ್ಲೂಕಿನಲ್ಲಿ 3.8, ತಿ.ನರಸೀಪುರ ತಾಲ್ಲೂಕಿನಲ್ಲಿ 2.8, ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ 2.7 ಸೆಂ.ಮೀನಷ್ಟು ಮಳೆ ಭಾನುವಾರ ರಾತ್ರಿ 9 ಗಂಟೆಯವರೆಗೆ ಆಗಿತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.</p>.<p>ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ಚಿಲ್ಕುಂದ ಗ್ರಾಮದಲ್ಲಿ ಮಳೆಗೆ ಹಲವು ಮನೆಗಳ ಚಾವಣಿಗಳು ಹಾರಿಹೋಗಿವೆ. ಹಲವು ಮರಗಳು ಧರೆಗುರುಳಿವೆ. ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ತೆಂಗು, ಅಡಿಕೆ ಮರಗಳು ನೆಲಕಚ್ಚಿವೆ.</p>.<p>ಜೋರು ಮಳೆಗೆ ಗುಲ್ಮೊಹರ್ ಮರದಲ್ಲಿ ಅರಳಿದ್ದ ಹೂಗಳು ಬಿದ್ದು, ರಸ್ತೆಯಲ್ಲಿ ಕೆಂಪು ಹಾಸಿಗೆ ಹಾಸಿದಂತೆ ಕಂಡಿತು. ನಗರದಲ್ಲಿ ತಂಪಾದ ವಾತಾವರಣ ಮೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>