<p><strong>ಮೈಸೂರು:</strong> ತಾಲ್ಲೂಕಿನಲ್ಲಿ ನಡೆದಿರುವ ಭೂ ಹಗರಣಗಳ ಕುರಿತು ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೊರಡಿಸಿದ್ದ ಅದೇಶಗಳಿಗೆ ಮರು ಜೀವ ಲಭಿಸಿದೆ.</p>.<p>ಮೈಸೂರು ತಾಲ್ಲೂಕು ಜಯಪುರ ಹೋಬಳಿ, ಕಸಬಾ ಹೋಬಳಿ, ಶ್ರೀರಂಗಪಟ್ಟಣ ತಾಲ್ಲೂಕು ಬೆಳಗೊಳ ಗ್ರಾಮದ ಕೆಲವು ಸ್ಥಳಗಳನ್ನು ಮರು ಸರ್ವೆ ಮಾಡುವಂತೆ ಭೂದಾಖಲೆಗಳ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ. ಪರಿಶೀಲನೆ ಕಾರ್ಯಕ್ಕೆ ಮೈಸೂರು ಜಿಲ್ಲೆಯ ಅಧಿಕಾರಿಗಳನ್ನು ಹೊರಗಿಟ್ಟು ತಂಡ ರಚಿಸಲಾಗಿದೆ.</p>.<p>ಮಂಡ್ಯ ಜಿಲ್ಲೆ ಭೂ ದಾಖಲೆಗಳ ಉಪನಿರ್ದೇಶಕ ಬಿ.ಜಿ.ಉಮೇಶ್, ತುಮಕೂರಿನ ಸುಜಯ್ ಕುಮಾರ್, ದಾವಣಗೆರೆಯ ಭೂದಾಖಲೆಗಳ ಸಹಾಯಕ ನಿರ್ದೇಶಕ ಟಿ.ಕೆ.ಲೋಹಿತ್ ತಂಡದಲ್ಲಿದ್ದಾರೆ. ಆ.31 ರಂದು ಆದೇಶ ಹೊರಡಿಸಿದ್ದು, 10 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.</p>.<p>*<br />‘ಮನೀಷ್ ಮೌದ್ಗಿಲ್ ಅವರು ಈ ಆದೇಶ ಹೊರಡಿಸಿದ್ದಾರೆ. ಸರ್ವೇ ಇಲಾಖೆ ಆಯುಕ್ತರಾದ ಕೂಡಲೇ ಅವರು ಈ ರಾಜ್ಯಕ್ಕೆ ಸುಪ್ರೀಂ ಆದರೇ?<br /><em><strong>-ಸಾ.ರಾ.ಮಹೇಶ್, ಶಾಸಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ತಾಲ್ಲೂಕಿನಲ್ಲಿ ನಡೆದಿರುವ ಭೂ ಹಗರಣಗಳ ಕುರಿತು ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೊರಡಿಸಿದ್ದ ಅದೇಶಗಳಿಗೆ ಮರು ಜೀವ ಲಭಿಸಿದೆ.</p>.<p>ಮೈಸೂರು ತಾಲ್ಲೂಕು ಜಯಪುರ ಹೋಬಳಿ, ಕಸಬಾ ಹೋಬಳಿ, ಶ್ರೀರಂಗಪಟ್ಟಣ ತಾಲ್ಲೂಕು ಬೆಳಗೊಳ ಗ್ರಾಮದ ಕೆಲವು ಸ್ಥಳಗಳನ್ನು ಮರು ಸರ್ವೆ ಮಾಡುವಂತೆ ಭೂದಾಖಲೆಗಳ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ. ಪರಿಶೀಲನೆ ಕಾರ್ಯಕ್ಕೆ ಮೈಸೂರು ಜಿಲ್ಲೆಯ ಅಧಿಕಾರಿಗಳನ್ನು ಹೊರಗಿಟ್ಟು ತಂಡ ರಚಿಸಲಾಗಿದೆ.</p>.<p>ಮಂಡ್ಯ ಜಿಲ್ಲೆ ಭೂ ದಾಖಲೆಗಳ ಉಪನಿರ್ದೇಶಕ ಬಿ.ಜಿ.ಉಮೇಶ್, ತುಮಕೂರಿನ ಸುಜಯ್ ಕುಮಾರ್, ದಾವಣಗೆರೆಯ ಭೂದಾಖಲೆಗಳ ಸಹಾಯಕ ನಿರ್ದೇಶಕ ಟಿ.ಕೆ.ಲೋಹಿತ್ ತಂಡದಲ್ಲಿದ್ದಾರೆ. ಆ.31 ರಂದು ಆದೇಶ ಹೊರಡಿಸಿದ್ದು, 10 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.</p>.<p>*<br />‘ಮನೀಷ್ ಮೌದ್ಗಿಲ್ ಅವರು ಈ ಆದೇಶ ಹೊರಡಿಸಿದ್ದಾರೆ. ಸರ್ವೇ ಇಲಾಖೆ ಆಯುಕ್ತರಾದ ಕೂಡಲೇ ಅವರು ಈ ರಾಜ್ಯಕ್ಕೆ ಸುಪ್ರೀಂ ಆದರೇ?<br /><em><strong>-ಸಾ.ರಾ.ಮಹೇಶ್, ಶಾಸಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>