ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒತ್ತುವರಿ ಮರು ಸರ್ವೆಗೆ ಆದೇಶ: ರೋಹಿಣಿ ಸಿಂಧೂರಿ ಆದೇಶಗಳಿಗೆ ಮತ್ತೆ ಜೀವ

Last Updated 4 ಸೆಪ್ಟೆಂಬರ್ 2021, 21:36 IST
ಅಕ್ಷರ ಗಾತ್ರ

ಮೈಸೂರು:‌ ತಾಲ್ಲೂಕಿನಲ್ಲಿ ನಡೆದಿರುವ ಭೂ ಹಗರಣಗಳ ಕುರಿತು ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೊರಡಿಸಿದ್ದ ಅದೇಶಗಳಿಗೆ ಮರು ಜೀವ ಲಭಿಸಿದೆ.

ಮೈಸೂರು ತಾಲ್ಲೂಕು ಜಯಪುರ ಹೋಬಳಿ, ಕಸಬಾ ಹೋಬಳಿ, ಶ್ರೀರಂಗಪಟ್ಟಣ ತಾಲ್ಲೂಕು ಬೆಳಗೊಳ ಗ್ರಾಮದ ಕೆಲವು ಸ್ಥಳಗಳನ್ನು ಮರು ಸರ್ವೆ ಮಾಡುವಂತೆ ಭೂದಾಖಲೆಗಳ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ. ಪರಿಶೀಲನೆ ಕಾರ್ಯಕ್ಕೆ ಮೈಸೂರು ಜಿಲ್ಲೆಯ ಅಧಿಕಾರಿಗಳನ್ನು ಹೊರಗಿಟ್ಟು ತಂಡ ರಚಿಸಲಾಗಿದೆ.

ಮಂಡ್ಯ ಜಿಲ್ಲೆ ಭೂ ದಾಖಲೆಗಳ ಉಪನಿರ್ದೇಶಕ ಬಿ.ಜಿ.ಉಮೇಶ್, ತುಮಕೂರಿನ ಸುಜಯ್ ಕುಮಾರ್, ದಾವಣಗೆರೆಯ ಭೂದಾಖಲೆಗಳ ಸಹಾಯಕ ನಿರ್ದೇಶಕ ಟಿ.ಕೆ.ಲೋಹಿತ್ ತಂಡದಲ್ಲಿದ್ದಾರೆ. ಆ.31 ರಂದು ಆದೇಶ ಹೊರಡಿಸಿದ್ದು, 10 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

*
‘ಮನೀಷ್‌ ಮೌದ್ಗಿಲ್‌ ಅವರು ಈ ಆದೇಶ ಹೊರಡಿಸಿದ್ದಾರೆ. ಸರ್ವೇ ಇಲಾಖೆ ಆಯುಕ್ತರಾದ ಕೂಡಲೇ ಅವರು ಈ ರಾಜ್ಯಕ್ಕೆ ಸುಪ್ರೀಂ ಆದರೇ?
-ಸಾ.ರಾ.ಮಹೇಶ್‌, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT