ಮೈಸೂರು: ಶಾಲೆಗಳು ಪುನರಾರಂಭವಾಗಿದ್ದು, ಜಿಟಿಜಿಟಿ ಮಳೆಯಲ್ಲಿ ಚಿಣ್ಣರು ಶಾಲೆಯತ್ತ ಧಾವಿಸಿದರು.
ಬಹುತೇಕ ಕಡೆ ಶಾಲಾ ಹಾಗೂ ಆವರಣವನ್ನು ತಳಿರು ತೋರಣದಿಂದ ಸಿಂಗರಿಸಲಾಗಿತ್ತು. ಶಿಕ್ಷಕರು ಹಾಗೂ ಎಸ್ಡಿಎಂಸಿ ಸದಸ್ಯರು ಮಕ್ಕಳಿಗೆ ಗುಲಾಬಿ ಹೂವು ಹಾಗೂ ಸಿಹಿ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಅಪೂರ್ವ ಸ್ನೇಹ ಬಳಗವು ಮೈಸೂರು ನಗರದ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಮಕ್ಕಳಿಗೆ ಕಲಿಕಾ ಸಾಮಗ್ರಿ ನೀಡಿತು. ಶಿಕ್ಷಕರು ಆರತಿ ಬೆಳಗಿ ವಿಶೇಷವಾಗಿ ಸ್ವಾಗತಿಸಿದರು.