ಗುರುವಾರ ನಡೆದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ‘ವಿಶ್ವವಿದ್ಯಾಲಯದವರು ರಾಜಕಾರಣಿಗಳಿಗಿಂತಲೂ ಹೆಚ್ಚಿನ ರಾಜಕೀಯದಲ್ಲಿ ತೊಡಗಿದ್ದೀರಿ. ಎಲ್ಲದಕ್ಕೂ ನನ್ನ ಬಳಿ ದಾಖಲೆ ಇದೆ. ಅನುಮೋದನೆಯೇ ಇಲ್ಲದೆ ಕೋರ್ಸ್ ನಡೆಸುತ್ತಿದ್ದೀರಿ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಏನಾಗಬೇಕು?’ ಎಂದು ಕೇಳಿದರು.