ಸಮಿತಿ ಅಧ್ಯಕ್ಷರಾಗಿ ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ನಾರಾಯಣಗೌಡ ಅವರನ್ನು ನೇಮಿಸಲಾಗಿದೆ. ರಾಜ್ಯಪಾಲರ ಪ್ರತಿನಿಧಿಯಾಗಿ ಇಂದೋರ್ ದೇವಿ ಅಹಿಲ್ಯಾ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕ ಬಿ.ಸಿ.ಚಪ್ಪರವಾಲ್, ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಪ್ರತಿನಿಧಿಯಾಗಿ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಜಗದೀಶ ಕುಮಾರ್, ಮೈಸೂರು ವಿಶ್ವವಿದ್ಯಾಲಯದ ಪ್ರತಿನಿಧಿಯಾಗಿ ಹೈದರಾಬಾದ್ ಭಾರತೀಯ ರಾಸಾಯನಿಕ ತಂತ್ರಜ್ಞಾನ ಸಂಸ್ಥೆ ನಿರ್ದೇಶಕ ಡಾ.ಎಸ್.ಚಂದ್ರಶೇಖರ್ ಸದಸ್ಯರಾಗಿ ನೇಮಕ ಮಾಡಲಾಗಿದೆ.