ಮೈಸೂರು: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆದ ಪ್ರಕರಣ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ಕರೆ ನೀಡಿರುವ ಮೈಸೂರು ಬಂದ್ಗೆ ನಗರದ ಕೇಂದ್ರ ಭಾಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹಲವೆಡೆ ಪ್ರತಿಭಟನಾಕಾರರು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಬೆಳಿಗ್ಗೆ 11 ರ ನಂತರ ಬಸ್ ಸಂಚಾರ ಆರಂಭವಾಗಿದೆ. ಬಲವಂತವಾಗಿ ಖಾಸಗಿ ಶಾಲಾ ಕಾಲೇಜುಗಳನ್ನು ಮುಚ್ಚಿಸಲಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಮನೆಗೆ ಕರೆತರಲು ಪರದಾಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ರಾಮಸ್ವಾಮಿ ವೃತ್ತ, ಕೋಟೆ ಅಂಜನೇಯಸ್ವಾಮಿ ದೇಗುಲದ ವೃತ್ತ, ರಿಂಗ್ ರಸ್ತೆಯ ಎಲ್ಲ ಜಂಕ್ಷನ್ ಗಳಲ್ಲೂ ರಸ್ತೆ ತಡೆ ನಡೆದಿದೆ.
ಮೈಸೂರು: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆದ ಪ್ರಕರಣ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ಕರೆ ನೀಡಿರುವ ಮೈಸೂರು ಬಂದ್ ಗೆ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಬೆಂಬಲ ನೀಡಿ, ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡರು.
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ,ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಮುಖಂಡರಾದ ಕೆ.ಮರೀಗೌಡ, ಎಂ.ಕೆ.ಸೋಮಶೇಖರ್, ಶಿವಣ್ಣ, ಇದ್ದರು.