ಪ್ರತಿಭಟನೆ ವೇಳೆ ‘ಫ್ರೀ ಕಾಶ್ಮೀರ’ ಫಲಕ ಹಿಡಿದು ವಿವಾದಕ್ಕೆ ಒಳಗಾದ ಬಿ.ನಳಿನಿ, ಪ್ರತಿಭಟನೆಯ ಆಯೋಜಕರಾದ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ ಹಾಗೂ ಇತರ ಆರೋಪಿಗಳ ಪರವಾಗಿ ವಕಲಾತು ವಹಿಸಲು ಬೆಂಗಳೂರಿನಿಂದ ಬಂದಿರುವ ಜಗದೀಶ್ ನೇತೃತ್ವದ ವಕೀಲರ ತಂಡವು ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ವಿಚಾರಣೆಯನ್ನು ನ್ಯಾಯಾಲಯವು ಮಧ್ಯಾಹ್ನ 3ಕ್ಕೆ ಮುಂದೂಡಿದೆ.