ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಮನೆ ಆವರಣದಲ್ಲಿ ಗಜಪಡೆ ತಾಲೀಮು

Last Updated 5 ಅಕ್ಟೋಬರ್ 2019, 17:06 IST
ಅಕ್ಷರ ಗಾತ್ರ

ಮೈಸೂರು: ಜಂಬೂಸವಾರಿ ಮೆರವಣಿಗೆಗೆ ಪೂರ್ವಭಾವಿಯಾಗಿ ಅರಮನೆ ಆವರಣದಲ್ಲಿ ಶನಿವಾರ ಪುಷ್ಪಾರ್ಚನೆಯ ಮೊದಲ ಹಂತದ ತಾಲೀಮು ನಡೆಸಲಾಯಿತು.

ಪೊಲೀಸರು ಪಥ ಸಂಚಲನದಲ್ಲಿ ಪಾಲ್ಗೊಂಡರು. ಅಂಬಾರಿ‌ ಕಟ್ಟುವ ಜಾಗದಿಂದ ಗಾಂಭೀರ್ಯವಾಗಿ ಹೆಜ್ಜೆ ಇಟ್ಟು ಬಂದ ಅರ್ಜುನ ಆನೆಗೆ ಮೇಯರ್‌ ಪುಷ್ಪಲತಾ ಜಗನ್ನಾಥ್‌, ಡಿಸಿಪಿ ಮುತ್ತುರಾಜ್‌ ಹಾಗೂ ಅರಣ್ಯ ಅಧಿಕಾರಿಗಳು ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ಗೌರವ ವಂದನೆ ಸಲ್ಲಿಸಿದರು.

‘ಆನೆಗಳು ಶಾಂತಚಿತ್ತವಾಗಿ ತಾಲೀಮಿನಲ್ಲಿ ಭಾಗವಹಿಸಿವೆ. ಅರ್ಜುನ ಕೂಡ ಗಾಂಭೀರ್ಯದಿಂದ ತನ್ನ ಕರ್ತವ್ಯ ನಿಭಾಯಿಸುತ್ತಿದ್ದಾನೆ’ ಎಂದು ಡಿಸಿಎಫ್‌ ಅಲೆಕ್ಸಾಂಡರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT