<p><strong>ಮೈಸೂರು: </strong>ಕೋವಿಡ್–19 ಕಾರಣ ಸತತ ಎರಡನೇ ವರ್ಷವೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ, ಅರಮನೆ ಆವರಣಕ್ಕೆ ಸೀಮಿತವಾಗಿ ನಡೆಯಲಿರುವ ದಸರಾ ಮಹೋತ್ಸವದ ಜಂಬೂಸವಾರಿ ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದೆ. </p>.<p>ಆನೆಗಳು ಅರಮನೆ ಮುಂಭಾಗಕ್ಕೆ ಬಂದು ನಿಂತಿವೆ. ಸ್ತಬ್ಧಚಿತ್ರವೂ ಸಿದ್ಧವಾಗಿವೆ.</p>.<p>ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರಕ್ಕೆ ಬಂದಿದ್ದು, ಮೊದಲು ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. </p>.<p>ಸಂಜೆ 4.36ಕ್ಕೆ ಪೂಜೆ ನಡೆಯಲಿದೆ. ಸಂಜೆ 5 ಗಂಟೆಗೆ ವಿಜಯದಶಮಿ ಮೆರವಣಿಗೆ ಚಾಲನೆ ನೀಡಲಿದ್ದಾರೆ. ಅಂಬಾರಿಯಲ್ಲಿ ವಿರಾಜಮಾನವಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.</p>.<p>ಸರಳ ಹಾಗೂ ಸಾಂಪ್ರದಾಯಿಕವಾಗಿ ಮೆರವಣಿಗೆ ನಡೆಯಲಿದ್ದು, 12 ಕಲಾ ತಂಡಗಳು ಹಾಗೂ ಆರು ಸ್ತಬ್ಧಚಿತ್ರಗಳು ಮಾತ್ರ ಭಾಗಿಯಾಗಲಿವೆ.</p>.<p>500 ಮಂದಿಗೆ ಮಾತ್ರ ಪ್ರವೇಶಾವಕಾಶ ಎಂದು ನಿಗದಿಯಾಗಿದ್ದರೂ ಅದಕ್ಕಿಂತ ಹೆಚ್ಚು ಜನರು ಅರಮನೆ ಆವರಣದಲ್ಲಿ ಸೇರಿದ್ದಾರೆ. ಕಲಾವಿದರು, ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಹಾಗೂ ಪೊಲೀಸರೇ ಅಧಿಕ ಸಂಖ್ಯೆಯಲ್ಲಿದ್ದಾರೆ.</p>.<p>ಅರಮನೆ ಸುತ್ತ ಅಲ್ಲಲ್ಲಿ ಜನ ಸೇರಿದ್ದಾರೆ. ಜಂಬೂಸವಾರಿ ವೀಕ್ಷಣೆಗಾಗಿ ಅರಮನೆ ಆವರಣದೊಳಗೆ ಬರಲು ಪ್ರಯತ್ನಿಸುತ್ತಿದ್ದಾರೆ. ಅವರನ್ನು ಚದುರಿಸಿದ ಪೊಲೀಸರು ಎಚ್ಚರಿಕೆ ನೀಡಿದರು. ಸುತ್ತಮುತ್ತ ವಾಹನಗಳ ಸಂಚಾರದ ಮೇಲೂ ನಿರ್ಬಂಧ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕೋವಿಡ್–19 ಕಾರಣ ಸತತ ಎರಡನೇ ವರ್ಷವೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ, ಅರಮನೆ ಆವರಣಕ್ಕೆ ಸೀಮಿತವಾಗಿ ನಡೆಯಲಿರುವ ದಸರಾ ಮಹೋತ್ಸವದ ಜಂಬೂಸವಾರಿ ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದೆ. </p>.<p>ಆನೆಗಳು ಅರಮನೆ ಮುಂಭಾಗಕ್ಕೆ ಬಂದು ನಿಂತಿವೆ. ಸ್ತಬ್ಧಚಿತ್ರವೂ ಸಿದ್ಧವಾಗಿವೆ.</p>.<p>ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರಕ್ಕೆ ಬಂದಿದ್ದು, ಮೊದಲು ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. </p>.<p>ಸಂಜೆ 4.36ಕ್ಕೆ ಪೂಜೆ ನಡೆಯಲಿದೆ. ಸಂಜೆ 5 ಗಂಟೆಗೆ ವಿಜಯದಶಮಿ ಮೆರವಣಿಗೆ ಚಾಲನೆ ನೀಡಲಿದ್ದಾರೆ. ಅಂಬಾರಿಯಲ್ಲಿ ವಿರಾಜಮಾನವಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.</p>.<p>ಸರಳ ಹಾಗೂ ಸಾಂಪ್ರದಾಯಿಕವಾಗಿ ಮೆರವಣಿಗೆ ನಡೆಯಲಿದ್ದು, 12 ಕಲಾ ತಂಡಗಳು ಹಾಗೂ ಆರು ಸ್ತಬ್ಧಚಿತ್ರಗಳು ಮಾತ್ರ ಭಾಗಿಯಾಗಲಿವೆ.</p>.<p>500 ಮಂದಿಗೆ ಮಾತ್ರ ಪ್ರವೇಶಾವಕಾಶ ಎಂದು ನಿಗದಿಯಾಗಿದ್ದರೂ ಅದಕ್ಕಿಂತ ಹೆಚ್ಚು ಜನರು ಅರಮನೆ ಆವರಣದಲ್ಲಿ ಸೇರಿದ್ದಾರೆ. ಕಲಾವಿದರು, ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಹಾಗೂ ಪೊಲೀಸರೇ ಅಧಿಕ ಸಂಖ್ಯೆಯಲ್ಲಿದ್ದಾರೆ.</p>.<p>ಅರಮನೆ ಸುತ್ತ ಅಲ್ಲಲ್ಲಿ ಜನ ಸೇರಿದ್ದಾರೆ. ಜಂಬೂಸವಾರಿ ವೀಕ್ಷಣೆಗಾಗಿ ಅರಮನೆ ಆವರಣದೊಳಗೆ ಬರಲು ಪ್ರಯತ್ನಿಸುತ್ತಿದ್ದಾರೆ. ಅವರನ್ನು ಚದುರಿಸಿದ ಪೊಲೀಸರು ಎಚ್ಚರಿಕೆ ನೀಡಿದರು. ಸುತ್ತಮುತ್ತ ವಾಹನಗಳ ಸಂಚಾರದ ಮೇಲೂ ನಿರ್ಬಂಧ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>