ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Mysuru Dasara: ಜಂಬೂ ಸವಾರಿಗೆ ಕ್ಷಣಗಣನೆ- ವೇದಿಕೆ ಮುಂಭಾಗಕ್ಕೆ ಬಂದ ಗಜಪಡೆ

Last Updated 15 ಅಕ್ಟೋಬರ್ 2021, 10:47 IST
ಅಕ್ಷರ ಗಾತ್ರ
ADVERTISEMENT

ಮೈಸೂರು: ಕೋವಿಡ್‌–19 ಕಾರಣ ಸತತ ಎರಡನೇ ವರ್ಷವೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ, ಅರಮನೆ ಆವರಣಕ್ಕೆ ಸೀಮಿತವಾಗಿ ನಡೆಯಲಿರುವ ದಸರಾ ಮಹೋತ್ಸವದ ಜಂಬೂಸವಾರಿ ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದೆ.

ಆನೆಗಳು ಅರಮನೆ ಮುಂಭಾಗಕ್ಕೆ ಬಂದು ನಿಂತಿವೆ. ಸ್ತಬ್ಧಚಿತ್ರವೂ ಸಿದ್ಧವಾಗಿವೆ.

ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರಕ್ಕೆ ಬಂದಿದ್ದು, ಮೊದಲು ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ.

ಸಂಜೆ 4.36ಕ್ಕೆ ಪೂಜೆ ನಡೆಯಲಿದೆ. ಸಂಜೆ 5 ಗಂಟೆಗೆ ವಿಜಯದಶಮಿ ಮೆರವಣಿಗೆ ಚಾಲನೆ ನೀಡಲಿದ್ದಾರೆ. ಅಂಬಾರಿಯಲ್ಲಿ ವಿರಾಜಮಾನವಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

ಸರಳ ಹಾಗೂ ಸಾಂಪ್ರದಾಯಿಕವಾಗಿ ಮೆರವಣಿಗೆ ನಡೆಯಲಿದ್ದು, 12 ಕಲಾ ತಂಡಗಳು ಹಾಗೂ ಆರು ಸ್ತಬ್ಧಚಿತ್ರಗಳು ಮಾತ್ರ ಭಾಗಿಯಾಗಲಿವೆ.

500 ಮಂದಿಗೆ ಮಾತ್ರ ಪ್ರವೇಶಾವಕಾಶ ಎಂದು ನಿಗದಿಯಾಗಿದ್ದರೂ ಅದಕ್ಕಿಂತ ಹೆಚ್ಚು ಜನರು ಅರಮನೆ ಆವರಣದಲ್ಲಿ ಸೇರಿದ್ದಾರೆ. ಕಲಾವಿದರು, ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಹಾಗೂ ಪೊಲೀಸರೇ ಅಧಿಕ ಸಂಖ್ಯೆಯಲ್ಲಿದ್ದಾರೆ.

ಅರಮನೆ ಸುತ್ತ ಅಲ್ಲಲ್ಲಿ ಜನ ಸೇರಿದ್ದಾರೆ. ಜಂಬೂಸವಾರಿ ವೀಕ್ಷಣೆಗಾಗಿ ಅರಮನೆ ಆವರಣದೊಳಗೆ ಬರಲು ಪ್ರಯತ್ನಿಸುತ್ತಿದ್ದಾರೆ. ಅವರನ್ನು ಚದುರಿಸಿದ ಪೊಲೀಸರು ಎಚ್ಚರಿಕೆ ನೀಡಿದರು. ಸುತ್ತಮುತ್ತ ವಾಹನಗಳ ಸಂಚಾರದ ಮೇಲೂ ನಿರ್ಬಂಧ ವಿಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT