ಚಿನ್ನದ ಅಂಬಾರಿಯಲ್ಲಿ ಮಹಾರಾಜರು ಕುಳಿತುಕೊಳ್ಳುವುದನ್ನು ವಿರೋಧಿಸಿ 1970ರ ದಶಕದಲ್ಲಿ ಸಮಾಜವಾದಿಗಳಾದ ಟಿ.ವಿ.ಶ್ರೀನಿವಾಸರಾಯ, ವೇದಾಂತ ಹೆಮ್ಮಿಗೆ, ಶ್ರೀಕಂಠಯ್ಯ, ಟಿ.ಎನ್.ನಾಗರಾಜ್ ಮೊದಲಾದವರು ಪ್ರತಿಭಟನೆ ನಡೆಸಿದ್ದರು. ದಸರಾ ನಿಲ್ಲಿಸುವಂತೆ ಆಗ್ರಹಿಸಿದ್ದರು. ಆ ಹೋರಾಟದಲ್ಲಿ ನಾನೂ ಭಾಗವಹಿಸಿದ್ದೆ. ಹೋರಾಟದ ನೇತೃತ್ವ ವಹಿಸಿದ್ದ ಮುಖಂಡರನ್ನು ಪೊಲೀಸರು ಬಂಧಿಸಿದ್ದರು.