ಅವರು ಅಸತ್ಯವಾದ ವಿಚಾರಗಳನ್ನು ಹೇಳಿದ್ದಾರೆ. ಅದಕ್ಕೆ ಸ್ಪಷ್ಟೀಕರಣ ನೀಡುತ್ತಿದ್ದೇನೆ. ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಅವರ ಕಷ್ಟ ಕಾಲದಲ್ಲಿ ರಿಸ್ಕ್ ತೆಗೆದುಕೊಂಡು ಆಕ್ಸಿಜನ್ ಕಳುಹಿಸಿದ್ದೇವೆ. ಅದು ನಮ್ಮ ಆಸ್ಪತ್ರೆಯಲ್ಲಿದ್ದ 40 ಸಿಲಿಂಡರ್ ಕಳುಹಿಸಿದ್ದೇವೆ. ಎಲ್ಲಿಯೂ ಆಸ್ಪತ್ರೆಯಿಂದ ಆಕ್ಸಿಜನ್ ಕಳುಹಿಸಿ ರಿಸ್ಕ್ ತೆಗೆದುಕೊಳ್ಳುವುದಿಲ್ಲ. ಇದು ಮಾನವೀಯತೆ ಅಲ್ಲವೇ ? ಎಂದು ಚಾಮರಾಜನಗರ ಡಿಸಿ ಎಂ ಆರ್ ರವಿಗೆ ರೋಹಿಣಿ ಸಿಂಧೂರಿ ಪ್ರಶ್ನೆ ಮಾಡಿದ್ದಾರೆ.