ಮೈಸೂರು: ಚಾಮರಾಜನಗರ ಡಿಸಿ ಸರಿಯಾಗಿ ನಿರ್ವಹಣೆ ಮಾಡದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಈ ರೀತಿ ಆಗಿದ್ದರೆ ಯಾರನ್ನಾದರೂ ಹೇಗಾದರೂ ಸಂಪರ್ಕಿಸಿ ಆಕ್ಸಿಜನ್ ಪಡೆಯುತ್ತಿದ್ದೆವು. ಅವರು ಆ ಕೆಲಸ ಮಾಡಿಲ್ಲ. ನಾವು ಜನರ ಪ್ರಾಣ ಉಳಿಸಲು 24 ಗಂಟೆ ಕೆಲಸ ಮಾಡುತ್ತಿದ್ದೇವೆ. ಅಷ್ಟು ಕೆಲಸ ಮಾಡಿದರೂ ಈ ರೀತಿ ಹೇಳಿದರೆ ನಮಗೂ ನೋವಾಗುತ್ತದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಆರೋಪಕ್ಕೆ ಮೈಸೂರುಡಿಸಿ ರೋಹಿಣಿ ಸಿಂಧೂರಿ ಭಾವುಕರಾಗಿದ್ದಾರೆ.
ಈ ಮಧ್ಯೆ, ಚಾಮರಾಜನಗರ ಡಿಸಿ ಎಂ.ಆರ್.ರವಿ ವಿರುದ್ದ ವಾಗ್ದಾಳಿ ನಡೆಸಿರುವ ರೋಹಿಣಿ ಸಿಂಧೂರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.