ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಹುರೂಪಿ ನಾಟಕೋತ್ಸವ; ಸಮಾರೋಪಕ್ಕೆ ಚಕ್ರವರ್ತಿ ಸೂಲಿಬೆಲೆ

10ರಿಂದ ಬಹುರೂಪಿ ನಾಟಕೋತ್ಸವ; ಸಮಾರೋಪಕ್ಕೆ ಆಹ್ವಾನ
Last Updated 1 ಡಿಸೆಂಬರ್ 2021, 20:45 IST
ಅಕ್ಷರ ಗಾತ್ರ

ಮೈಸೂರು: ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಭಾಷಣವನ್ನು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ನಡೆಸಿಕೊಡಲಿದ್ದಾರೆ’ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ಪ್ರಕಟಿಸಿದಾಗ, ಸುದ್ದಿಗಾರರು‘ಆಹ್ವಾನ ಪತ್ರಿಕೆಯಲ್ಲಿ ಸೂಲಿಬೆಲೆ ಅವರಿಗೆ ಸಮಾಜ ಸೇವಕ ಎಂಬ ವಿಶೇಷಣ ಬಳಸಲಾಗಿದೆ. ಅವರ ಸಮಾಜಸೇವೆ ಏನು’ ಎಂದು ಪ್ರಶ್ನಿಸಿದರು.

‘ಯಾರು ಏನೇ ಹೇಳಲಿ, ಸೂಲಿಬೆಲೆ ಸಮಾರೋಪ ಭಾಷಣ ಮಾಡಲಿದ್ದಾರೆ. ಅವರ ಭಾಷಣವನ್ನು ಕೇಳಿ, ಆ ಕುರಿತು ಏನು ಬೇಕಾದರೂ ಬರೆಯಿರಿ. ಅವರು ಯುವಜನರಲ್ಲಿ ದೇಶಪ್ರೇಮದ ಜಾಗೃತಿ ಮೂಡಿಸಿ ಸಮಾಜ ಸೇವೆ ಮಾಡುತ್ತಿದ್ದಾರೆ’ ಎಂದು ಹೇಳಿದ ಕಾರ್ಯಪ್ಪ, ‘ಅವರನ್ನು ಏಕೆ ಕರೆಯಬಾರದು, ಅವರೇನು ದೇಶದ್ರೋಹಿಯೇ’ ಎಂದು ಮರು ಪ್ರಶ್ನೆ ಹಾಕಿದರು.

‘ಸೂಲಿಬೆಲೆ ಅವರನ್ನು ಮಾಧ್ಯಮದ ಎಲ್ಲರೂ ವಿರೋಧಿಸುತ್ತಿಲ್ಲ. ಮಾಧ್ಯಮದವರಲ್ಲೇ ಗುಂಪುಗಾರಿಕೆ ಇದೆ’ ಎಂದೂ ಅಡ್ಡಂಡ ಸಿ. ಕಾರ್ಯಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT