<p><strong>ಮೈಸೂರು: </strong>‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಭಾಷಣವನ್ನು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ನಡೆಸಿಕೊಡಲಿದ್ದಾರೆ’ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಹೇಳಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ಪ್ರಕಟಿಸಿದಾಗ, ಸುದ್ದಿಗಾರರು‘ಆಹ್ವಾನ ಪತ್ರಿಕೆಯಲ್ಲಿ ಸೂಲಿಬೆಲೆ ಅವರಿಗೆ ಸಮಾಜ ಸೇವಕ ಎಂಬ ವಿಶೇಷಣ ಬಳಸಲಾಗಿದೆ. ಅವರ ಸಮಾಜಸೇವೆ ಏನು’ ಎಂದು ಪ್ರಶ್ನಿಸಿದರು.</p>.<p>‘ಯಾರು ಏನೇ ಹೇಳಲಿ, ಸೂಲಿಬೆಲೆ ಸಮಾರೋಪ ಭಾಷಣ ಮಾಡಲಿದ್ದಾರೆ. ಅವರ ಭಾಷಣವನ್ನು ಕೇಳಿ, ಆ ಕುರಿತು ಏನು ಬೇಕಾದರೂ ಬರೆಯಿರಿ. ಅವರು ಯುವಜನರಲ್ಲಿ ದೇಶಪ್ರೇಮದ ಜಾಗೃತಿ ಮೂಡಿಸಿ ಸಮಾಜ ಸೇವೆ ಮಾಡುತ್ತಿದ್ದಾರೆ’ ಎಂದು ಹೇಳಿದ ಕಾರ್ಯಪ್ಪ, ‘ಅವರನ್ನು ಏಕೆ ಕರೆಯಬಾರದು, ಅವರೇನು ದೇಶದ್ರೋಹಿಯೇ’ ಎಂದು ಮರು ಪ್ರಶ್ನೆ ಹಾಕಿದರು.</p>.<p>‘ಸೂಲಿಬೆಲೆ ಅವರನ್ನು ಮಾಧ್ಯಮದ ಎಲ್ಲರೂ ವಿರೋಧಿಸುತ್ತಿಲ್ಲ. ಮಾಧ್ಯಮದವರಲ್ಲೇ ಗುಂಪುಗಾರಿಕೆ ಇದೆ’ ಎಂದೂ ಅಡ್ಡಂಡ ಸಿ. ಕಾರ್ಯಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಭಾಷಣವನ್ನು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ನಡೆಸಿಕೊಡಲಿದ್ದಾರೆ’ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಹೇಳಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ಪ್ರಕಟಿಸಿದಾಗ, ಸುದ್ದಿಗಾರರು‘ಆಹ್ವಾನ ಪತ್ರಿಕೆಯಲ್ಲಿ ಸೂಲಿಬೆಲೆ ಅವರಿಗೆ ಸಮಾಜ ಸೇವಕ ಎಂಬ ವಿಶೇಷಣ ಬಳಸಲಾಗಿದೆ. ಅವರ ಸಮಾಜಸೇವೆ ಏನು’ ಎಂದು ಪ್ರಶ್ನಿಸಿದರು.</p>.<p>‘ಯಾರು ಏನೇ ಹೇಳಲಿ, ಸೂಲಿಬೆಲೆ ಸಮಾರೋಪ ಭಾಷಣ ಮಾಡಲಿದ್ದಾರೆ. ಅವರ ಭಾಷಣವನ್ನು ಕೇಳಿ, ಆ ಕುರಿತು ಏನು ಬೇಕಾದರೂ ಬರೆಯಿರಿ. ಅವರು ಯುವಜನರಲ್ಲಿ ದೇಶಪ್ರೇಮದ ಜಾಗೃತಿ ಮೂಡಿಸಿ ಸಮಾಜ ಸೇವೆ ಮಾಡುತ್ತಿದ್ದಾರೆ’ ಎಂದು ಹೇಳಿದ ಕಾರ್ಯಪ್ಪ, ‘ಅವರನ್ನು ಏಕೆ ಕರೆಯಬಾರದು, ಅವರೇನು ದೇಶದ್ರೋಹಿಯೇ’ ಎಂದು ಮರು ಪ್ರಶ್ನೆ ಹಾಕಿದರು.</p>.<p>‘ಸೂಲಿಬೆಲೆ ಅವರನ್ನು ಮಾಧ್ಯಮದ ಎಲ್ಲರೂ ವಿರೋಧಿಸುತ್ತಿಲ್ಲ. ಮಾಧ್ಯಮದವರಲ್ಲೇ ಗುಂಪುಗಾರಿಕೆ ಇದೆ’ ಎಂದೂ ಅಡ್ಡಂಡ ಸಿ. ಕಾರ್ಯಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>