ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ತರಬೇತಿ ಶಾಲೆಯ ಇನ್‌ಸ್ಪೆಕ್ಟರ್ ಅಮಾನತು

ಪ್ರಶಿಕ್ಷಣಾರ್ಥಿಗಳಿಂದ ಹಣ ವಸೂಲು ಆರೋಪ
Last Updated 11 ಆಗಸ್ಟ್ 2021, 2:14 IST
ಅಕ್ಷರ ಗಾತ್ರ

ಮೈಸೂರು: ಪ್ರಶಿಕ್ಷಣಾರ್ಥಿಗಳಿಂದ ಹಣ ವಸೂಲು ಮಾಡಿದ ಆರೋಪದ ಮೇರೆಗೆ ಇಲ್ಲಿನ ಪೊಲೀಸ್ ತರಬೇತಿ ಶಾಲೆಯ ಇನ್‌ಸ್ಪೆಕ್ಟರ್ ಸುಬ್ರಹ್ಮಣ್ಯ ಅವರನ್ನು ಪೊಲೀಸ್ ಮಹಾನಿರ್ದೇಶಕ ಪ್ರವೀಣ್‌ಸೂದ್‌ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಾಲೆಯಲ್ಲಿ ಬುನಾದಿ ತರಬೇತಿ ಪಡೆಯುತ್ತಿರುವ 8 ತುಕಡಿಯ ಪ್ರಶಿಕ್ಷಣಾರ್ಥಿಗಳಲ್ಲಿ ತುಕಡಿಯಿಂದ ಒಬ್ಬರು ಅಥವಾ ಇಬ್ಬರು ಪ್ರಶಿಕ್ಷಣಾರ್ಥಿಗಳ ಮೂಲಕ ಉಳಿದ ಪ್ರಶಿಕ್ಷಣಾರ್ಥಿಗಳಿಂದ ತಲಾ ₹ 2,500ನ್ನು ಗೂಗಲ್‌ಪೇ, ಫೋನ್‌ಪೇ ಮೂಲಕ ತುಕಡಿಯ ಒಬ್ಬರ ಬ್ಯಾಂಕ್ ಖಾತೆಗೆ ಒಟ್ಟು ₹ 5.90 ಲಕ್ಷ ಹಣ ಸಂದಾಯ ಮಾಡಿಸಿಕೊಂಡಿರುವ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT