ಮೈಸೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.
ಉಡುಪಿ ಕರಾವಳಿ ಕಾವಲು ಪೊಲೀಸ್ ಪಡೆಯಎಸ್ಪಿಯಾಗಿದ್ದ ಆರ್.ಚೇತನ್ ಅವರು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಯಾಗಿದ್ದಾರೆ.
2010ರ ಐಪಿಎಸ್ ಶ್ರೇಣಿಯ ಅಧಿಕಾರಿಯಾದ ಆರ್.ಚೇತನ್ ಅವರು ಈ ಹಿಂದೆ ದಾವಣಗೆರೆ, ಬಳ್ಳಾರಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಎಸ್.ಪಿಯಾಗಿ ಕಾರ್ಯನಿರ್ವಹಿಸಿದ್ದರು.
ಡಿಸಿಪಿ ವರ್ಗಾವಣೆ:ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಡಾ.ಎ.ಎನ್.ಪ್ರಕಾಶ್ಗೌಡ ಅವರು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ಇವರ ಸ್ಥಾನಕ್ಕೆ ಆಂತರಿಕ ಭದ್ರತಾ ವಿಭಾಗದ ವರಿಷ್ಠಾಧಿಕಾರಿಯಾಗಿದ್ದ ಪ್ರದೀಪ್ ಗುಂಟಿ ಅವರು ವರ್ಗಾವಣೆಯಾಗಿದ್ದಾರೆ