ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ನಿಲಯಗಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

Last Updated 24 ಮೇ 2022, 8:16 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ನೇತೃತ್ವದಲ್ಲಿ ಮಾನಸಗಂಗೋತ್ರಿಯಲ್ಲಿ ಸೇರಿದ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿದರು.

ಈಚೆಗೆ ಸುರಿದ ಭಾರಿ ಮಳೆಯಿಂದ ಬಹುತೇಕ ವಿದ್ಯಾರ್ಥಿನಿಲಯಗಳು ಸೋರುತ್ತಿವೆ. ಶುದ್ಧ ಕುಡಿಯುವ ನೀರಿನ ಸೌಲಭ್ಯದ ಕೊರತೆಯಿಂದ ವಿದ್ಯಾರ್ಥಿಗಳು ಬಳಲುವಂತಾಗಿದೆ ಎಂದು ದೂರಿದರು.

ಹಾಸ್ಟೆಲ್‌ಗಳಲ್ಲಿ ಸ್ವಚ್ಛತೆಯೂ ಇಲ್ಲದಂತಾಗಿದೆ. ಕಟ್ಟಡಗಳ ದುರಸ್ತಿ ಕಾರ್ಯ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಅಧ್ಯಕ್ಷ ನಟರಾಜ್ ಶಿವಣ್ಣ, ಗೌರವಾಧ್ಯಕ್ಷ ಸೋಸಲೆ ಮಹೇಶ್, ಕಾರ್ಯದರ್ಶಿ ಜೆ.ಶಿವಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT