ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಮಾರ್ಚ್ 16ರ ಬುಧವಾರ ಗೌತಮ ರಥೋತ್ಸವ, ದೊಡ್ಡ ಜಾತ್ರೆಯು ನಡೆಯಲಿದೆ.
ದೇವಾಲಯದ ದಾಸೋಹ ಭವನದಲ್ಲಿ ಜಾತ್ರೆ ಸಂಬಂಧ ಶಾಸಕ ಹರ್ಷವರ್ಧನ್ ನೇತೃತ್ವದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು. ಅಗತ್ಯ ಸಿದ್ಧತೆ, ರಥದ ಸುರಕ್ಷತೆ, ದಾಸೋಹ ಹಾಗೂ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಕೋವಿಡ್ ಕಾರಣ ಎರಡು ವರ್ಷಗಳಿಂದ ಜಾತ್ರೆಯನ್ನು ಸರಳವಾಗಿ ನಡೆಸಲಾಗಿತ್ತು. ಮಾರ್ಗಸೂಚಿ ಅನ್ವಯ ಈ ಬಾರಿ ಅದ್ಧೂರಿಯಾಗಿ ಜಾತ್ರೆ ನಡೆಯಲಿದೆ.