ದೇವಾಲಯದ ಮುಂಭಾಗ ಭಕ್ತರು ಉರುಳು ಸೇವೆ, ಧೂಪ, ದೀಪದ ಸೇವೆಯಲ್ಲಿ ನಿರತರಾಗಿದ್ದರು. ಹರಿಕೆ ಮುಡಿ ಸಲ್ಲಿಸಲು, ಮುಡಿಕಟ್ಟೆಯಲ್ಲಿ ಭಕ್ತರ ಸಂದಣಿ ಏರ್ಪಟ್ಟಿತ್ತು. ಸೀಗೆ ಹುಣ್ಣಿಮೆ ಪ್ರಯುಕ್ತ ಪಾರ್ವತಿ ಸಮೇತ ಶ್ರೀಕಂಠೇಶ್ವರ ಸ್ವಾಮಿಯ ಮೂರ್ತಿಗಳನ್ನು ಚಿಕ್ಕ ತೇರಿನಲ್ಲಿ ಪ್ರತಿಷ್ಠಾಪಿಸಿ, ದೇವಾಲಯದ ಸುತ್ತ ಭಕ್ತರು ತೇರು ಎಳೆದು ಸಂಭ್ರಮಿಸಿದರು.