ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂಜನಗೂಡು ಶ್ರೀಕಂಠೇಶ್ವರ ದೇಗುಲ: ಇಂದಿನಿಂದ ಪ್ರವೇಶ ನಿರ್ಬಂಧ

Last Updated 17 ಅಕ್ಟೋಬರ್ 2020, 5:10 IST
ಅಕ್ಷರ ಗಾತ್ರ

ನಂಜನಗೂಡು: ದಸರಾ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಸಾಧ್ಯತೆ ಇರುವುದರಿಂದ ಅ.17 ರಿಂದ ನ. 1 ರವರೆಗೆ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಆದೇಶ ಹೊರಡಿಸ ಲಾಗಿದೆ. ಗಣ್ಯವ್ಯಕ್ತಿಗಳು, ಅಧಿಕಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ.

‘ಎಂದಿನಂತೆ ಧಾರ್ಮಿಕ ಕಾರ್ಯಕ್ರಮ, ಪೂಜಾ ಕೈಂಕರ್ಯಗಳನ್ನು ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿ ಉಪಸ್ಥಿತಿಯಲ್ಲಿ ನೆರವೇರಿಸಲಾಗುವುದು’ ಎಂದು ದೇವಾಲಯದ ಆಡಳಿತಾಧಿಕಾರಿ ಶಿವಕುಮಾರಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT