ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂಜನಗೂಡು: ಶ್ರೀಕಂಠೇಶ್ವರ ಜಾತ್ರೆ ರದ್ದು

Last Updated 16 ಮಾರ್ಚ್ 2021, 20:42 IST
ಅಕ್ಷರ ಗಾತ್ರ

ನಂಜನಗೂಡು: ಇದೇ 26ರಂದು ನಡೆಯಬೇಕಿದ್ದ ಶ್ರೀಕಂಠೇಶ್ವರ ಸ್ವಾಮಿಯ ಪಂಚ ಮಹಾರಥೋತ್ಸವವನ್ನು (ದೊಡ್ಡ ಜಾತ್ರೆ) ರದ್ದುಪಡಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಥೋತ್ಸವ ರದ್ದುಪಡಿಸಲಾಗಿದೆ. ಪೂರ್ವ ನಿಗದಿಯಂತೆ ಮಾರ್ಚ್ 19ರಿಂದ 30ರವರೆಗೆ ದೇವಾಲಯದಲ್ಲಿ ನಡೆಯುವ ಸಂಪ್ರದಾಯ ಬದ್ಧ ಧಾರ್ಮಿಕ ವಿಧಿ ವಿಧಾನಗಳನ್ನು ಸ್ಥಳೀಯರ ಸಹಯೋಗದೊಂದಿಗೆ ದೇವಾಲಯದ ಒಳಗೇ ನಡೆಸಬಹುದು. ಮಾರ್ಚ್‌ 26ರಂದು ಸಾಂಕೇತಿಕವಾಗಿ ಚಿಕ್ಕ ತೇರಿನಲ್ಲಿ ಉತ್ಸವ ನಡೆಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT